September 6, 2026
ಆಯ್ಕೆಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ 2025 – 26 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ, ಉಪಾಧ್ಯಕ್ಷರುಗಳಾಗಿ ಆನಂದ ಹೆಗ್ಡೆ ಹಾಗೂ ಸುರೇಶ್ ಆಚಾರ್, ಕಾರ್ಯದರ್ಶಿಯಾಗಿ ಗಣೇಶ್ ಮೆಸ್ಕಾಂ, ಜೊತೆ ಕಾರ್ಯದರ್ಶಿಯಾಗಿ ಆನಂದ ದೇವಾಡಿಗ, ಕೋಶಾಧಿಕಾರಿಯಾಗಿ ಎಂ. ಡಿ ಸಂಜೀವ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೃಷ್ಣಕುಮಾರ್ ಐತಾಳ್ , ಜಗನ್ನಾಥ, ಹರಿದಾಸ್ ಕೆ, ಸದಾಶಿವ ಶೆಟ್ಟಿ,ಯೋಗೀಶ, ವೆಂಕಟರಮಣ ಆಚಾರ್, ಸಲಹೆಗಾರರುಗಳಾಗಿ ವಿಜಯಕುಮಾರ್, ಪದ್ಮ ಕುಮಾರ್ ಎಚ್ , ಕೃಷ್ಣ ಕೆ, ರವಿಚಂದ್ರ ಭಟ್, ರವೀಂದ್ರ ಗೌಡ ಇವರುಗಳನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಪ್ರಧಾನ ಸಂಚಾಲಕರಾಗಿ ಡಾ| ಕೆ. ಜಿ. ಪಣಿಕ್ಕರ್ ಸಂಚಾಲಕರುಗಳಾಗಿ ಆನಂದ ಶೆಟ್ಟಿ ಕೆ.ಎನ್ , ಗಣೇಶ್ ಐತಾಳ್ , ಅನಂತಕೃಷ್ಣ , ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಮುಂದುವರಿಸಲಾಯಿತು.
ವಿಜಯ್ ಕುಮಾರ್ ಸ್ವಾಗತಿಸಿದರು. ಅನಂತ ಕೃಷ್ಣರವರು ಕಳೆದ ಸಾಲಿನ ಲೆಕ್ಕಪತ್ರ ಮಂಡಿಸಿ, ಧನ್ಯವಾದ ಸಮರ್ಪಿಸಿದರು.

Related posts

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!