ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಕಂಬಳ ಹೊಕ್ಕಾಡಿಗೋಳಿ ಇದರ ಕಂಬಳ ನಡೆಸುವುದರ ಬಗ್ಗೆ ಪ್ರಥಮ ಹಂತದ ಪೂರ್ವಭಾವಿ ಸಭೆಯು ಕಂಬಳದ ವಠಾರದಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು ವಹಿಸಿದರು. ಡಿ.21ರಂದು ಹೊಕ್ಕಾಡಿಗೋಳಿ ಕಂಬಳವು ವಿಜೃಂಭಣೆಯಿಂದ ಜರಗಲಿದೆ ಎಂದು ಸಭೆಯಲ್ಲಿ ತಿಳಿಸಿದರು. ಮುಂದಿನ ವಾರ ಕರೆ ಮುಹೂರ್ತವು ನಡೆಯಲಿದ್ದು ಸಹಕರಿಸುವ ವಿವಿಧ ಸಂಘ ಸಂಸ್ಥೆಗಳು, ಭಜನಾ ಮಂಡಳಿಯ ಸದಸ್ಯರು, ಕಂಬಳಾಭಿಮಾನಿಗಳು ಕುದಿ ಕಂಬಳ ನಡೆಸಲು ಶ್ರಮದಾನದ ಮೂಲಕ ಕೈ ಜೋಡಿಸುವಂತೆ ವಿನಂತಿಸಿದರು. ಅತೀ ಶೀಘ್ರದಲ್ಲಿ ಕಂಬಳದ ಆಮಂತ್ರಣ ಪತ್ರ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ, ಗೌರವ ಸಲಹೆ ಗಾರರು, ಕಾರ್ಯದರ್ಶಿ, ಉಪಾಧ್ಯಕ್ಷರುಗಳು, ಸದಸ್ಯರು ಕಂಬಲಾಭಿಮಾನಿಗಳು ಉಪಸ್ಥಿತರಿದ್ದರು.











