37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

ಬೆಳ್ತಂಗಡಿ: ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು
ಮಾದಕ ವ್ಯಸನ ಮುಕ್ತ ಭಾರತದ ನಿರ್ಮಾಣಕ್ಕಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನ.1 ರಂದು ನಡೆಸಲಾಯಿತು.
ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣವನ್ನು ಕಕ್ಕಿಂಜೆ ಮಸ್ಜಿದ್ ಉಪಾಧ್ಯಕ್ಷ ಇಲ್ಯಾಸ್ ಕಕ್ಕಿಂಜೆ ನೆರವೇರಿಸಿದರು.

ಉಸ್ತಾದ್ ರಫೀಕ್ ಅಝ್ಹರಿ ದುವಾ ಹಾಗೂ ಸಂದೇಶ ಭಾಷಣಗೈದರು.
ಈ ಸಂದಭದಲ್ಲಿ ಮಸ್ಜಿದ್ ಆಡಳಿತ ಸಮಿತಿ ಜೊತೆ ಕಾರ್ಯದರ್ಶಿ ನಾಸಿರ್ ಕೆ.ಹೆಚ್, ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾ ಉಪಾಧ್ಯಕ್ಷ ಸ್ವದಕತುಲ್ಲ ದಾರಿಮಿ, ಜಿಲ್ಲಾ ವರ್ಕಿಂಗ್ ಕಾರ್ಯದರ್ಶಿ ಯಾಸಿರ್ ಚಿಬಿದ್ರೆ, ಕಕ್ಕಿಂಜೆ ಶಾಖೆ ಉಪಾಧ್ಯಕ್ಷ ಹಂಝ ಡಿ ಮಜಲ್, ಬೆಳ್ತಂಗಡಿ ತಾಲೂಕು ಅರೋಗ್ಯ ಸಮೀತಿ ಸದಸ್ಯ ರಶೀದ್ ಯು.ಕೆ, ಅದೇ ರೀತಿ ಮಸ್ಜಿದ್ ಸಮಿತಿ ಸದಸ್ಯರು, ಎಸ್ಕೆಎಸ್ಸೆಸ್ಸೆಫ್ ಕಕ್ಕಿಂಜೆ ಶಾಖೆಯ ಸದಸ್ಯರು, ನೂರುಲ್ ಇಸ್ಲಾಮ್ ಮದರಸ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು, ಜಲಾಲಿಯ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್ಕೆಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ನಾಸಿರ್ ಕಲ್ಲಗುಡ್ಡೆ ಸ್ವಾಗತಿಸಿದರು.

Related posts

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಅಂಗದಾನ ಜಾಗೃತಿ ಕಾರ್ಯಕ್ರಮ ‘ಧಾತ್ರು’ ಆಯೋಜನೆ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!