25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಯೋಗ ಶಾಖೆಯಲ್ಲಿ ತುಳಸಿ ಪೂಜೆಯನ್ನು ನೆರವೇರಿಸಲಾಯಿತು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸಹ ಶಿಕ್ಷಕ ಸುಕೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿತ್ಯ ಯೋಗ ತರಗತಿಯನ್ನು ಸತೀಶ್ ನಾಳ ನಿರ್ವಹಿಸಿದರು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ತುಳಸಿ ವಿವಾಹ, ತುಳಸಿ ಪೂಜೆಯ ಮಹತ್ವ,ಲೌಕಿಕ ಮತ್ತು ಆಧ್ಯಾತ್ಮಿಕ, ಧಾರ್ಮಿಕ ವಿಧಿ ವಿಧಾನಗಳಲ್ಲಿ ತುಳಸಿಯ ಮಹತ್ವ ಮತ್ತು ತುಳಸಿಯಿಂದ ಸಿಗುವ ಪ್ರಯೋಜನಗಳ ಬಗ್ಗೆ ಭೌದ್ಧಿಕ ನೀಡಿದರು.

ಶಾಖೆಯ ಸಹಶಿಕ್ಷಕ ಸುಕೇಶ್, ವರದಿ ಪ್ರಮುಖ ಕೇಶವ, ಶಾಖೆಯ ಸಂಚಾಲಕ ವಿಜಯಣ್ಣ,ಸತೀಶ್, ಅಶೋಕ, ವಸಂತ ಉಪಸ್ಥಿತರಿದ್ದರು.
ಭಾರತಿ, ಪದ್ಮಲತಾ, ಅರುಣಕ್ಕ ತುಳಸಿ ಪೂಜೆಯನ್ನು ನೆರವೇರಿಸಿ ಪೂಜಾ ಪ್ರಸಾದ ವಿತರಿಸಲಾಯಿತು. ಶಾಖೆಯ ಯೋಗ ಬಂಧುಗಳ ಸಹಕಾರದಿಂದ ಅಮೃತ ಫಲಾಹಾರವನ್ನು ಜೋಡಿಸಲಾಗಿತ್ತು.

Related posts

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya
error: Content is protected !!