July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಯೋಗ ಶಾಖೆಯಲ್ಲಿ ತುಳಸಿ ಪೂಜೆಯನ್ನು ನೆರವೇರಿಸಲಾಯಿತು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸಹ ಶಿಕ್ಷಕ ಸುಕೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿತ್ಯ ಯೋಗ ತರಗತಿಯನ್ನು ಸತೀಶ್ ನಾಳ ನಿರ್ವಹಿಸಿದರು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ತುಳಸಿ ವಿವಾಹ, ತುಳಸಿ ಪೂಜೆಯ ಮಹತ್ವ,ಲೌಕಿಕ ಮತ್ತು ಆಧ್ಯಾತ್ಮಿಕ, ಧಾರ್ಮಿಕ ವಿಧಿ ವಿಧಾನಗಳಲ್ಲಿ ತುಳಸಿಯ ಮಹತ್ವ ಮತ್ತು ತುಳಸಿಯಿಂದ ಸಿಗುವ ಪ್ರಯೋಜನಗಳ ಬಗ್ಗೆ ಭೌದ್ಧಿಕ ನೀಡಿದರು.

ಶಾಖೆಯ ಸಹಶಿಕ್ಷಕ ಸುಕೇಶ್, ವರದಿ ಪ್ರಮುಖ ಕೇಶವ, ಶಾಖೆಯ ಸಂಚಾಲಕ ವಿಜಯಣ್ಣ,ಸತೀಶ್, ಅಶೋಕ, ವಸಂತ ಉಪಸ್ಥಿತರಿದ್ದರು.
ಭಾರತಿ, ಪದ್ಮಲತಾ, ಅರುಣಕ್ಕ ತುಳಸಿ ಪೂಜೆಯನ್ನು ನೆರವೇರಿಸಿ ಪೂಜಾ ಪ್ರಸಾದ ವಿತರಿಸಲಾಯಿತು. ಶಾಖೆಯ ಯೋಗ ಬಂಧುಗಳ ಸಹಕಾರದಿಂದ ಅಮೃತ ಫಲಾಹಾರವನ್ನು ಜೋಡಿಸಲಾಗಿತ್ತು.

Related posts

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya
error: Content is protected !!