September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.1 ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಕನ್ನಡಕ್ಕಾಗಿ ಹೋರಾಡಿದ ವ್ಯಕ್ತಿಗಳನ್ನು ಸ್ಮರಿಸುವುದರ ಜೊತೆಗೆ ಸುಂದರ – ಸುಲಲಿತವಾದ ಕನ್ನಡ ಭಾಷೆಯನ್ನು ಮಾತನಾಡುತ್ತಾ ನಾವು ಕನ್ನಡಿಗರು ಎಂಬ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳಾದ ಶ್ರೇಯಸ್ ದಿನದ ಮಹತ್ವದ ಕುರಿತು ಮಾತನಾಡಿದರು. ತ್ರಿಶಾ ಜೈನ್ ಮತ್ತು ಮೋಕ್ಷಿತ್ ಸ್ವರಚಿತ ಕವನವನ್ನು ವಾಚಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆಗಳ ಗಾಯನ ನೆರವೇರಿತು.

ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪದಬಂಧ ತುಂಬಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪುಸ್ತಕ ಮತ್ತು ಪುರಸ್ಕೃತರ ಪ್ರಮುಖ ಪುಸ್ತಕವನ್ನು ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶಾಲೆಗೆ ಟಿವಿಯನ್ನು ಕೊಡುಗೆಯಾಗಿ ನೀಡಲಾಯಿತು. ಇದನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಶಿಧರ್ ಮತ್ತು ಉಪಾಧ್ಯಕ್ಷರಾದ ಪದ್ಮನಾಭ ಇವರು ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.

ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಕುರ್ಕಿಲ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕನ್ನಡ ಶಿಕ್ಷಕ ಸುಮನ್ ಯು ಎಸ್ ಸಂಯೋಜಿಸಿದರು. ವಿದ್ಯಾರ್ಥಿಗಳಾದ ಮೋಹನ್ ಕೃಷ್ಣ ಸ್ವಾಗತಿಸಿ, ಕಾರ್ತಿಕ್ ವಂದಿಸಿದರು‌. ಆಯಿಷತ್ ಸಂಶಿಯಾ ನಿರೂಪಿಸಿದರು.

Related posts

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya
error: Content is protected !!