September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

ಮಡಂತ್ಯಾರು : ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಕರಾಯ, ಪುಂಜಾಲಕಟ್ಟೆ ವಲಯ ಮತ್ತು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರು ಇವರ ಸಹಯೋಗದಲ್ಲಿ ವಲಯ ಮಟ್ಟದ 14 ರ ವಯೋಮಾನದ ಬಾಲಕ-ಬಾಲಕಿಯರ ಕ್ರೀಡಾಕೂಟ ನ.3ರಂದು ಸೇಕ್ರೆಡ್ ಹಾರ್ಟ್ ಕ್ರೀಡಾಂಗಣದಲ್ಲಿ ನೆರವೇರಿತು.

ಈ ಕ್ರೀಡಾಕೂಟವನ್ನು ಪ್ರಾರ್ಥನ ಗೀತೆಯನ್ನು ಹಾಡಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಕ್ರೀಡಾಕೂಟದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಡಾ| ಸ್ಟ್ಯಾನಿ ಗೋವಿಯಸ್ ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿ, ಈ ಕ್ರೀಡಾಕೂಟವು ಒಳ್ಳೆಯ ರೀತಿಯಲ್ಲಿ ನೆರವೇರಲಿ, ಸೋಲು-ಗೆಲುವು ಎಂಬುದು ಕ್ರೀಡೆಯಲ್ಲಿ ಸಾಮಾನ್ಯ ಎಂದು ಹೇಳಿ, ಕ್ರೀಡಾಪಟುಗಳಿಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ರಾಜಶೇಖರ ಶೆಟ್ಟಿ ಆಗಮಿಸಿದ್ದರು. ಶಿಕ್ಷಕರ ರಕ್ಷಕ ಸಂಘದ ಉಪಾಧ್ಯಕ್ಷ ರವೀಂದ್ರ ರೈ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಮಹಮ್ಮದ್ ಶರೀಫ್, ಶ್ರೀಮತಿ ಚೇತನ, ರಾಜೇಶ್ ರವರು, ಪುಂಜಾಲ್ ಕಟ್ಟೆ ವಲಯದ ನೋಡಲ್ ಅಧಿಕಾರಿಯಾದ ಜಯರಾಜ್ ಜೈನ್, ಬೆಳ್ತಂಗಡಿ ತಾಲೂಕು ಮುಖ್ಯೋಪಾಧ್ಯಾಯರ ಸಂಘದ ನಿರ್ದೇಶಕರಾದ ಕೃಷ್ಣಪ್ಪ, ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ರವಿರಾಜ್, ಪುಂಜಾಲ್ ಕಟ್ಟೆ ವಲಯದ ನೋಡಲ್ ಅಧಿಕಾರಿಯಾದ ಗೋಪಾಲ ಮತ್ತು ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

ರಾಜೇಶ್ ನಿರೂಪಿಸಿ, ವಲೇರಿಯನ್ ಡಿಸೋಜ ಸ್ವಾಗತಿಸಿ, ಶ್ರೀಮತಿ ಚೇತನ ಧನ್ಯವಾದವನ್ನು ಸಮರ್ಪಿಸಿದರು.

Related posts

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!