23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

ಧರ್ಮಸ್ಥಳ: ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ಮಾಡಲು ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಳು ಹಾಕಿ ಜಪ್ತಿ ಮಾಡಿದ್ದಾರೆ.

ಧರ್ಮಸ್ಥಳ ಪೊಲೀಸರು ‌ನ.2 ರಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು KA-19-MC-5862 ನಂಬರಿನ ರಿಟ್ಜ್ ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್@ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದನ ನೀಡಿದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಜೋಹಾರ ಸೇರಿ ಮೂವರ ವಿರುದ್ಧ ಕಲ5,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ 11,(1)(D) ಪ್ರಾಣಿ ಹಿಂಸೆ ಕಾಯಿದೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಮೂರು ದನಗಳನ್ನು ಆರೋಪಿ A-2 ಉಳ್ಳಾಲ ತಾಲೂಕಿನ ಸಜಿಪನಾಡು ಗ್ರಾಮದ ತಂಚಿಬೆಟ್ಟು ನಿವಾಸಿ ಮಹಮ್ಮದ್ ಮಗ ಇಬ್ರಾಹಿಂ ಖಲೀಲ್ @ ತೌಸೀಫ್ ಮನೆಯಲ್ಲಿ ಗೋಮಾಂಸ ಮಾಡುವುದಾಗಿ ಬಾಯಿಬಿಟ್ಟಿದ್ದರು ಇದರಿಂದ ಧರ್ಮಸ್ಥಳ ಪೊಲೀಸರು ಉಳ್ಳಾದಲ್ಲಿರುವ ಇಬ್ರಾಹಿಂ ಖಲೀಲ್ @ ತೌಸೀಫ್ ಮನೆಯನ್ನು ನ.4 ರಂದು ಮುಟ್ಟುಗೋಳು ಹಾಕಿ ಜಪ್ತಿ ಮಾಡಿಕೊಂಡಿದ್ದಾರೆ.

Related posts

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya
error: Content is protected !!