22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

ಧರ್ಮಸ್ಥಳ: ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ಮಾಡಲು ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಳು ಹಾಕಿ ಜಪ್ತಿ ಮಾಡಿದ್ದಾರೆ.

ಧರ್ಮಸ್ಥಳ ಪೊಲೀಸರು ‌ನ.2 ರಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು KA-19-MC-5862 ನಂಬರಿನ ರಿಟ್ಜ್ ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್@ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದನ ನೀಡಿದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಜೋಹಾರ ಸೇರಿ ಮೂವರ ವಿರುದ್ಧ ಕಲ5,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ 11,(1)(D) ಪ್ರಾಣಿ ಹಿಂಸೆ ಕಾಯಿದೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಮೂರು ದನಗಳನ್ನು ಆರೋಪಿ A-2 ಉಳ್ಳಾಲ ತಾಲೂಕಿನ ಸಜಿಪನಾಡು ಗ್ರಾಮದ ತಂಚಿಬೆಟ್ಟು ನಿವಾಸಿ ಮಹಮ್ಮದ್ ಮಗ ಇಬ್ರಾಹಿಂ ಖಲೀಲ್ @ ತೌಸೀಫ್ ಮನೆಯಲ್ಲಿ ಗೋಮಾಂಸ ಮಾಡುವುದಾಗಿ ಬಾಯಿಬಿಟ್ಟಿದ್ದರು ಇದರಿಂದ ಧರ್ಮಸ್ಥಳ ಪೊಲೀಸರು ಉಳ್ಳಾದಲ್ಲಿರುವ ಇಬ್ರಾಹಿಂ ಖಲೀಲ್ @ ತೌಸೀಫ್ ಮನೆಯನ್ನು ನ.4 ರಂದು ಮುಟ್ಟುಗೋಳು ಹಾಕಿ ಜಪ್ತಿ ಮಾಡಿಕೊಂಡಿದ್ದಾರೆ.

Related posts

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಜೂನ್ 30 ರಂದು ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya
error: Content is protected !!