25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಅಳದಂಗಡಿ: ಪಿಲ್ಯ ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವು ಶಾಲಾ ಸಂಚಾಲಕ ನಜೀರ್ ಅಹಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ಜರಗಿತು .

ಶ್ರೀಮತಿ ಕುಮುದಾಕ್ಷಿ ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ ಪ್ರಭಾಕರ್ ಶೆಟ್ಟಿಯವರು ಪ್ರಾಸ್ತಾವಿಕ ಮಾತಿನೊಂದಿಗೆ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯ 100% ಫಲಿತಾಂಶಕ್ಕಾಗಿ ಎಲ್ಲಾ ಮಕ್ಕಳನ್ನೂ, ಶಿಕ್ಷಕಿಯರನ್ನು ಅಭಿನಂದಿಸಿದರು.
ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ದಿತೀಕ್ಷ್ ದೀಪೇಶ್, ಶರ್ವಿನ್, ಫೈಹಾ ಮತ್ತು ಆಶೀರ್ ಇವರನ್ನು ವಿಶೇಷವಾಗಿ ಗೌರವಿಸುವುದರ ಜೊತೆಗೆ ಉತ್ತೀರ್ಣರಾದ ಎಲ್ಲರನ್ನೂ ಗೌರವಿಸಲಾಯಿತು.

ವಿಶೇಷ ಆಹ್ವಾನಿತರಾದ ಶಾಜಿ ಕೆ ಕುರಿಯನ್ ರವರು ಅಭಿನಂದಿಸಿ ಮಕ್ಕಳಿಗೆ ಶುಭವನ್ನು ಕೋರಿದರು. ಸಂಚಾಲಕರು ಮಕ್ಕಳನ್ನು ಅಭಿನಂದಿಸುವುದರ ಜೊತೆಗೆ ಇದಕ್ಕೆ ಕಾರಣೀಭೂತರಾದ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಪರಿಶ್ರಮಕ್ಕೆ ಕೃತಜ್ಞತೆಯನ್ನು ಅರ್ಪಿಸಿದರು. ವೇದಿಕೆಯಲ್ಲಿ ಶುಕುರ್ ಸಾಹೇಬ್, ಧನಕೀರ್ತಿ ಜೈನ್, ವೀರೇಂದ್ರ ಕುಮಾರ್ ಜೈನ್, ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶ್ರೀಮತಿ ಸೌಜನ್ಯ ಮಕ್ಕಳನ್ನು ಪರಿಚಯಿಸಿದರು. ಶಿಕ್ಷಕಿಯರಾದ ರೂಪ ನಿರೂಪಿಸಿ, ಶೃತಿ ವಂದಿಸಿದರು.

Related posts

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!