July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಅಳದಂಗಡಿ: ಪಿಲ್ಯ ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವು ಶಾಲಾ ಸಂಚಾಲಕ ನಜೀರ್ ಅಹಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ಜರಗಿತು .

ಶ್ರೀಮತಿ ಕುಮುದಾಕ್ಷಿ ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ ಪ್ರಭಾಕರ್ ಶೆಟ್ಟಿಯವರು ಪ್ರಾಸ್ತಾವಿಕ ಮಾತಿನೊಂದಿಗೆ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯ 100% ಫಲಿತಾಂಶಕ್ಕಾಗಿ ಎಲ್ಲಾ ಮಕ್ಕಳನ್ನೂ, ಶಿಕ್ಷಕಿಯರನ್ನು ಅಭಿನಂದಿಸಿದರು.
ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ದಿತೀಕ್ಷ್ ದೀಪೇಶ್, ಶರ್ವಿನ್, ಫೈಹಾ ಮತ್ತು ಆಶೀರ್ ಇವರನ್ನು ವಿಶೇಷವಾಗಿ ಗೌರವಿಸುವುದರ ಜೊತೆಗೆ ಉತ್ತೀರ್ಣರಾದ ಎಲ್ಲರನ್ನೂ ಗೌರವಿಸಲಾಯಿತು.

ವಿಶೇಷ ಆಹ್ವಾನಿತರಾದ ಶಾಜಿ ಕೆ ಕುರಿಯನ್ ರವರು ಅಭಿನಂದಿಸಿ ಮಕ್ಕಳಿಗೆ ಶುಭವನ್ನು ಕೋರಿದರು. ಸಂಚಾಲಕರು ಮಕ್ಕಳನ್ನು ಅಭಿನಂದಿಸುವುದರ ಜೊತೆಗೆ ಇದಕ್ಕೆ ಕಾರಣೀಭೂತರಾದ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಪರಿಶ್ರಮಕ್ಕೆ ಕೃತಜ್ಞತೆಯನ್ನು ಅರ್ಪಿಸಿದರು. ವೇದಿಕೆಯಲ್ಲಿ ಶುಕುರ್ ಸಾಹೇಬ್, ಧನಕೀರ್ತಿ ಜೈನ್, ವೀರೇಂದ್ರ ಕುಮಾರ್ ಜೈನ್, ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶ್ರೀಮತಿ ಸೌಜನ್ಯ ಮಕ್ಕಳನ್ನು ಪರಿಚಯಿಸಿದರು. ಶಿಕ್ಷಕಿಯರಾದ ರೂಪ ನಿರೂಪಿಸಿ, ಶೃತಿ ವಂದಿಸಿದರು.

Related posts

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya
error: Content is protected !!