September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಉಜಿರೆ ವತಿಯಿಂದ “ಕಾಯೌ ಶ್ರೀಗೌರಿ” ಶೀರ್ಷಿಕೆಯಡಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ.3 ರಂದು ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಭವ್ಯವಾಗಿ ನಡೆಯಿತು.

ಮುಖ್ಯ ಅತಿಥಿಯಾಗಿ ಸಹಾಯಕ ಪ್ರಾಧ್ಯಾಪಕರು (ಕನ್ನಡ ವಿಭಾಗ) ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಶ್ರೀನಾಥ್ ಎಂ.ಪಿ. ರವರು ಪಾಲ್ಗೊಂಡು, ಕನ್ನಡದ ಮಹತ್ವ ಹಾಗೂ ಸಂಸ್ಕೃತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ಮತ್ತು ಯೋಗ ವಿಭಾಗದ ಡೀನ್ ಹಾಗೂ ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya
error: Content is protected !!