September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

ಉಜಿರೆ: ನಾಡಿನ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪಾದಯಾತ್ರೆಯ ಪೂರ್ವಭಾವಿ ಸಭೆಯು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನ. 4ರಂದು ನಡೆಯಿತು‌.

ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶೀಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯರವರು ಮಾತನಾಡಿ ಸುಮಾರು12 ವರ್ಷಗಳ ಹಿಂದೆ ಪ್ರಾರಂಭವಾದ ಪಾದಯಾತ್ರೆಯು ಇಂದು ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಸಾತ್ವಿಕ ಶಕ್ತಿ ಮತ್ತು ಭಕ್ತಿಯನ್ನು ತೋರಿಸುತ್ತದೆ. ದೇವರ ದಯೆ ಮತ್ತು ಹಿರಿಯರ ಅನುಗ್ರಹವಿದ್ದರೆ ಪರಂಪರೆ ಸೃಷ್ಟಿಯಾಗುತ್ತದೆ ಎಂದರು.

ವಿಧಾನ ಪರಿಷತ್ ಮಾಜಿ ಶಾಸಕ, ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಮಾತನಾಡಿ ಪ್ರತಿವರ್ಷ ಪಾದಯಾತ್ರೆಯಲ್ಲಿ ನಾಡಿನ ಸಮಸ್ತ ಭಕ್ತರು ಅತ್ಯಂತ ಶ್ರದ್ದಾ ಭಕ್ತಿಯಿಂದ ಸೇರುತ್ತಾರೆ. ನಾವೆಲ್ಲರೂ ಭಕ್ತಿಯಿಂದ ಪಾಲ್ಗೊಂಡು ಪುನೀತರಾಗೋಣ.ಕ್ಷೇತ್ರದ ಪಾವಿತ್ರತೆಯನ್ನು ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಮತ್ತು ಆಗುವುದು ಇಲ್ಲ ಎಂದರು.

ಎಸ್.ಡಿ.ಎಂ ಪೂರಣ್ ವರ್ಮ ಮಾತನಾಡಿ ಉಜಿರೆಯಿಂದ ಶ್ರೀ ಕ್ಷೇತ್ರಕ್ಕೆ ನಡೆಯುವ ಪಾದಯಾತ್ರೆಯ ಯಶಸ್ವಿಗೆ ಶ್ರೀ ಕ್ಷೇತ್ರದ ಭಕ್ತರು, ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರಕ್ಕೆ ತೆರಳಿ ಪೂಜ್ಯ ಖಾವಂದರ ಮಾತು ಕೇಳಿದಾಗ ನಮ್ಮಲ್ಲಿ ಸಾರ್ಥಕ ಭಾವ ಮೂಡುತ್ತದೆ ಎಂದರು.

ವೇದಿಕೆಯಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ವಂದ್ರ ಎಸ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ್ ಪೈ, ಬೆಳ್ತಂಗಡಿ ಜನಜಾಗೃತಿ ವೇದಿಕೆಯ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ,ಉಜಿರೆ ಗ್ರಾಮ‌ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆಯ ಕರಪತ್ರ ಬಿಡುಗಡೆಗೊಳಿಸಲಾಯಿತು. ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್, ಸತ್ಯದರ್ಶನ ಕಾರ್ಯಕ್ರಮ ಸಮಿತಿ ಸಂಚಾಲಕ ಸುಬ್ರಹ್ಮಣ್ಯ ಕುಮಾರ್ ಆಗರ್ತ ಉಪಸ್ಥಿತರಿದ್ದರು.

ಯೋಜನಾಧಿಕಾರಿ ಯಶೋಧರ್ ಸ್ವಾಗತಿಸಿದರು. ಯೋಜನಾಧಿಕಾರಿ ರಾಮ್ ಕುಮಾರ್ ನಿರೂಪಿಸಿದರು. ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿಎಸ್ ವಂದಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಜನಜಾಗೃತಿ ಯೋಜನೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ವಿವಿಧ ಅಭಿಪ್ರಾಯಗಳನ್ನು ತಿಳಿಸಿದರು.

Related posts

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya
error: Content is protected !!