32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ವಹಿಸಿ ಕನ್ನಡ ನಾಡು ನುಡಿ ಯ ಮಹತ್ವ ದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.

ಮುಖ್ಯ ಅತಿಥಿಯಾಗಿ ಸ್ಥಳೀಯ ಪ್ರಗತಿಪರ ಕೃಷಿಕ ರಾಮನಂದ ನಾಯಕ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ಮಾತನಾಡಿ ಕನ್ನಡ ನಾಡು ಬೆಳೆದು ಬಂದ ಹಾದಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಮೇಲಿನಡ್ಕದ ಮೋಹನ್ ಭಟ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಸ್ವಾಗತಿಸಿ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾದ ಶ್ರೀಮತಿ ಶೀಲಾ ಎನ್ ಧನ್ಯವಾದವಿತ್ತರು. ಶಾಲಾ ಶಿಕ್ಷಕಿಯಾದ ಕುಮಾರಿ ಜತಿಕ್ಷ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!