July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಶಾಲಾ ಅಭಿವೃದ್ಧಿ ಸಮಿತಿಯವರ ಮನವಿಯ ಮೇರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಮನವಿಯನ್ನು ಸಲ್ಲಿಸಿದ್ದು ಈ ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿ ಶಾಲೆಯನ್ನು ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆರಿಸಿ ಆದೇಶವನ್ನು ಮಾಡಿದ್ದು. ಶಾಲಾ ಅಭಿವೃದ್ಧಿಯ ಮನವಿಗೆ ಸ್ಪಂದಿಸಿ ಕೆಪಿಎಸ್ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರಿಗೆ ಸಮಿತಿಯವರು ಇಂದು ಕಚೇರಿಯಲ್ಲಿ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹರೀಶ್ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ, ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ\ ಸುಧೀರ್ ಕುಮಾರ್ ಶೆಟ್ಟಿ ಕೋರಬೆಟ್ಟು, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಘಟಕದ ಪ್ರಧಾನ ಕಾರ್ಯದರ್ಶಿ ನಾರಾಯಣ ಪೂಜಾರಿ ಮಚ್ಚಿನ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಹರೀಶ್ ಕುದ್ಕೊಳಿ, ಅಶ್ರಫ್ ಕಾರಂದೂರು, ಕಿರಣ್ ಭಟ್, ರೊನಾಲ್ಡ್ ಕುದ್ಕೊಳಿ, ಸುಧೀರ್ ಬರೆದಾಡಿ, ಸಂಪತ್ ಪೂಜಾರಿ ಕೈಲಾ, ಶ್ರೀಮತಿ ವಿದ್ಯಾ ಕುತ್ತಿನ, ಶ್ರೀಮತಿ ಸವಿತಾ, ಕೇಶವ ಪೂಜಾರಿ, ಉಪಸ್ಥಿತರಿದ್ದರು.

Related posts

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

Suddi Udaya

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya
error: Content is protected !!