26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಸರಕಾರದ ಗಮನ ಸೆಳೆಯಲು ಕೋರಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಆರ್ಥಿಕ ವ್ಯವಸ್ಥೆಯಲ್ಲಿ ತನ್ನದೇ ಪಾಲು ಹೊಂದಿರುವ ರಬ್ಬರು ಹಿಂದೆ ಸರಕಾರ ಹೆಚ್ಚಿನ ಮಹತ್ವ ನೀಡಿ ಸಹಾಯಧನ, ಸಾಲ ಹಾಗೂ ಇತರ ಪ್ರೋತ್ಸಾಹ ನೀಡಿದ್ದ ರಬ್ಬರು ಬೆಳೆಯ ವಿಸ್ತೀರ್ಣ ಕಡಿಮೆಯಾಗುತ್ತಿರುವುದು, ಅವಲಂಬಿತ ಕೃಷಿಕರು ಅನುಭವಿಸುತ್ತಿರುವ ಸಮಸ್ಯೆ ಹಾಗೂ ಇದೀಗ ರಬ್ಬರು ಕೃಷಿಯನ್ನು ಹೊಸದಾಗಿ ಪ್ರಾರಂಭಿಸಲು ಆಸಕ್ತಿ ತೋರಿಸದೇ ಇರಲು ಕಾರಣಗಳ ಬಗ್ಗೆ ವಿವರಿಸಲಾಗಿದೆ. ಅಂತೆಯೇ ಕೇರಳ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರೋತ್ಸಾಹಧನ ಯೋಜನೆಯನ್ನು ನಮ್ಮ ರಾಜ್ಯದಲ್ಲಿಯೂ ಜಾರಿಗೊಳಿಸಿ ಬೆಳೆಗಾರರನ್ನು ರಕ್ಷಿಸುವಂತೆ ವಿನಂತಿಸಲಾಯಿತು. ಎಂದು ವೇದಿಕೆಯ ಅಧ್ಯಕ್ಷ ಶ್ರೀಧರ ಜಿ ಭಿಡೆ ತಿಳಿಸಿದರು.

ಈ ಸಂದರ್ಭದಲ್ಲಿ ಸಲಹೆಗಾರರಾದ ಹಿರಿಯ ಅರ್ಥಿಕ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ರಬ್ಬರು ಮಂಡಳಿ ಸದಸ್ಯರಾದ ಮುಳಿಯ ಕೇಶವ ಭಟ್, ಉಪಾಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಗೋಪಾಲಕೃಷ್ಣ ಭಟ್, ಕೃಪಾ, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿಗಳಾದ ರಾಜು ಶೆಟ್ಟಿ ಉಜಿರೆ, ವಿಜಯ ಕೃಷ್ಣ ಪೆರಾಜೆ ಮತ್ತು ಬೆಳ್ತಂಗಡಿ ರಬ್ಬರ್ ಸೊಸೈಟಿ ನಿರ್ದೇಶಕ ಶಾಜಿ ಪಿ ಎ ಶಿಬಾಜೆ ಉಪಸ್ಥಿತರಿದ್ದರು.

Related posts

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!