September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

ಧರ್ಮಸ್ಥಳ: ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ಮಾಡಲು ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಳು ಹಾಕಿ ಜಪ್ತಿ ಮಾಡಿದ್ದಾರೆ.

ಧರ್ಮಸ್ಥಳ ಪೊಲೀಸರು ‌ನ.2 ರಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು KA-19-MC-5862 ನಂಬರಿನ ರಿಟ್ಜ್ ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್@ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದನ ನೀಡಿದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಜೋಹಾರ ಸೇರಿ ಮೂವರ ವಿರುದ್ಧ ಕಲ5,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ 11,(1)(D) ಪ್ರಾಣಿ ಹಿಂಸೆ ಕಾಯಿದೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಮೂರು ದನಗಳನ್ನು ಆರೋಪಿ A-2 ಉಳ್ಳಾಲ ತಾಲೂಕಿನ ಸಜಿಪನಾಡು ಗ್ರಾಮದ ತಂಚಿಬೆಟ್ಟು ನಿವಾಸಿ ಮಹಮ್ಮದ್ ಮಗ ಇಬ್ರಾಹಿಂ ಖಲೀಲ್ @ ತೌಸೀಫ್ ಮನೆಯಲ್ಲಿ ಗೋಮಾಂಸ ಮಾಡುವುದಾಗಿ ಬಾಯಿಬಿಟ್ಟಿದ್ದರು ಇದರಿಂದ ಧರ್ಮಸ್ಥಳ ಪೊಲೀಸರು ಉಳ್ಳಾದಲ್ಲಿರುವ ಇಬ್ರಾಹಿಂ ಖಲೀಲ್ @ ತೌಸೀಫ್ ಮನೆಯನ್ನು ನ.4 ರಂದು ಮುಟ್ಟುಗೋಳು ಹಾಕಿ ಜಪ್ತಿ ಮಾಡಿಕೊಂಡಿದ್ದಾರೆ.

Related posts

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya
error: Content is protected !!