July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಅಳದಂಗಡಿ: ಪಿಲ್ಯ ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವು ಶಾಲಾ ಸಂಚಾಲಕ ನಜೀರ್ ಅಹಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ಜರಗಿತು .

ಶ್ರೀಮತಿ ಕುಮುದಾಕ್ಷಿ ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ ಪ್ರಭಾಕರ್ ಶೆಟ್ಟಿಯವರು ಪ್ರಾಸ್ತಾವಿಕ ಮಾತಿನೊಂದಿಗೆ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯ 100% ಫಲಿತಾಂಶಕ್ಕಾಗಿ ಎಲ್ಲಾ ಮಕ್ಕಳನ್ನೂ, ಶಿಕ್ಷಕಿಯರನ್ನು ಅಭಿನಂದಿಸಿದರು.
ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ದಿತೀಕ್ಷ್ ದೀಪೇಶ್, ಶರ್ವಿನ್, ಫೈಹಾ ಮತ್ತು ಆಶೀರ್ ಇವರನ್ನು ವಿಶೇಷವಾಗಿ ಗೌರವಿಸುವುದರ ಜೊತೆಗೆ ಉತ್ತೀರ್ಣರಾದ ಎಲ್ಲರನ್ನೂ ಗೌರವಿಸಲಾಯಿತು.

ವಿಶೇಷ ಆಹ್ವಾನಿತರಾದ ಶಾಜಿ ಕೆ ಕುರಿಯನ್ ರವರು ಅಭಿನಂದಿಸಿ ಮಕ್ಕಳಿಗೆ ಶುಭವನ್ನು ಕೋರಿದರು. ಸಂಚಾಲಕರು ಮಕ್ಕಳನ್ನು ಅಭಿನಂದಿಸುವುದರ ಜೊತೆಗೆ ಇದಕ್ಕೆ ಕಾರಣೀಭೂತರಾದ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಪರಿಶ್ರಮಕ್ಕೆ ಕೃತಜ್ಞತೆಯನ್ನು ಅರ್ಪಿಸಿದರು. ವೇದಿಕೆಯಲ್ಲಿ ಶುಕುರ್ ಸಾಹೇಬ್, ಧನಕೀರ್ತಿ ಜೈನ್, ವೀರೇಂದ್ರ ಕುಮಾರ್ ಜೈನ್, ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶ್ರೀಮತಿ ಸೌಜನ್ಯ ಮಕ್ಕಳನ್ನು ಪರಿಚಯಿಸಿದರು. ಶಿಕ್ಷಕಿಯರಾದ ರೂಪ ನಿರೂಪಿಸಿ, ಶೃತಿ ವಂದಿಸಿದರು.

Related posts

ಮೇ 21: ವಿದ್ಯುತ್ ನಿಲುಗಡೆ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಇಂದಬೆಟ್ಟು ವಲಯದ ಸಭೆ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಪ್ರ. ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್

Suddi Udaya
error: Content is protected !!