23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಅಳದಂಗಡಿ: ಪಿಲ್ಯ ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವು ಶಾಲಾ ಸಂಚಾಲಕ ನಜೀರ್ ಅಹಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ಜರಗಿತು .

ಶ್ರೀಮತಿ ಕುಮುದಾಕ್ಷಿ ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ ಪ್ರಭಾಕರ್ ಶೆಟ್ಟಿಯವರು ಪ್ರಾಸ್ತಾವಿಕ ಮಾತಿನೊಂದಿಗೆ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯ 100% ಫಲಿತಾಂಶಕ್ಕಾಗಿ ಎಲ್ಲಾ ಮಕ್ಕಳನ್ನೂ, ಶಿಕ್ಷಕಿಯರನ್ನು ಅಭಿನಂದಿಸಿದರು.
ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ದಿತೀಕ್ಷ್ ದೀಪೇಶ್, ಶರ್ವಿನ್, ಫೈಹಾ ಮತ್ತು ಆಶೀರ್ ಇವರನ್ನು ವಿಶೇಷವಾಗಿ ಗೌರವಿಸುವುದರ ಜೊತೆಗೆ ಉತ್ತೀರ್ಣರಾದ ಎಲ್ಲರನ್ನೂ ಗೌರವಿಸಲಾಯಿತು.

ವಿಶೇಷ ಆಹ್ವಾನಿತರಾದ ಶಾಜಿ ಕೆ ಕುರಿಯನ್ ರವರು ಅಭಿನಂದಿಸಿ ಮಕ್ಕಳಿಗೆ ಶುಭವನ್ನು ಕೋರಿದರು. ಸಂಚಾಲಕರು ಮಕ್ಕಳನ್ನು ಅಭಿನಂದಿಸುವುದರ ಜೊತೆಗೆ ಇದಕ್ಕೆ ಕಾರಣೀಭೂತರಾದ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಪರಿಶ್ರಮಕ್ಕೆ ಕೃತಜ್ಞತೆಯನ್ನು ಅರ್ಪಿಸಿದರು. ವೇದಿಕೆಯಲ್ಲಿ ಶುಕುರ್ ಸಾಹೇಬ್, ಧನಕೀರ್ತಿ ಜೈನ್, ವೀರೇಂದ್ರ ಕುಮಾರ್ ಜೈನ್, ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶ್ರೀಮತಿ ಸೌಜನ್ಯ ಮಕ್ಕಳನ್ನು ಪರಿಚಯಿಸಿದರು. ಶಿಕ್ಷಕಿಯರಾದ ರೂಪ ನಿರೂಪಿಸಿ, ಶೃತಿ ವಂದಿಸಿದರು.

Related posts

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!