25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಅಳದಂಗಡಿ: ಪಿಲ್ಯ ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವು ಶಾಲಾ ಸಂಚಾಲಕ ನಜೀರ್ ಅಹಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ಜರಗಿತು .

ಶ್ರೀಮತಿ ಕುಮುದಾಕ್ಷಿ ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ ಪ್ರಭಾಕರ್ ಶೆಟ್ಟಿಯವರು ಪ್ರಾಸ್ತಾವಿಕ ಮಾತಿನೊಂದಿಗೆ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯ 100% ಫಲಿತಾಂಶಕ್ಕಾಗಿ ಎಲ್ಲಾ ಮಕ್ಕಳನ್ನೂ, ಶಿಕ್ಷಕಿಯರನ್ನು ಅಭಿನಂದಿಸಿದರು.
ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ದಿತೀಕ್ಷ್ ದೀಪೇಶ್, ಶರ್ವಿನ್, ಫೈಹಾ ಮತ್ತು ಆಶೀರ್ ಇವರನ್ನು ವಿಶೇಷವಾಗಿ ಗೌರವಿಸುವುದರ ಜೊತೆಗೆ ಉತ್ತೀರ್ಣರಾದ ಎಲ್ಲರನ್ನೂ ಗೌರವಿಸಲಾಯಿತು.

ವಿಶೇಷ ಆಹ್ವಾನಿತರಾದ ಶಾಜಿ ಕೆ ಕುರಿಯನ್ ರವರು ಅಭಿನಂದಿಸಿ ಮಕ್ಕಳಿಗೆ ಶುಭವನ್ನು ಕೋರಿದರು. ಸಂಚಾಲಕರು ಮಕ್ಕಳನ್ನು ಅಭಿನಂದಿಸುವುದರ ಜೊತೆಗೆ ಇದಕ್ಕೆ ಕಾರಣೀಭೂತರಾದ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಪರಿಶ್ರಮಕ್ಕೆ ಕೃತಜ್ಞತೆಯನ್ನು ಅರ್ಪಿಸಿದರು. ವೇದಿಕೆಯಲ್ಲಿ ಶುಕುರ್ ಸಾಹೇಬ್, ಧನಕೀರ್ತಿ ಜೈನ್, ವೀರೇಂದ್ರ ಕುಮಾರ್ ಜೈನ್, ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶ್ರೀಮತಿ ಸೌಜನ್ಯ ಮಕ್ಕಳನ್ನು ಪರಿಚಯಿಸಿದರು. ಶಿಕ್ಷಕಿಯರಾದ ರೂಪ ನಿರೂಪಿಸಿ, ಶೃತಿ ವಂದಿಸಿದರು.

Related posts

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ- ಚಂದ್ರ ಜೋಡುಕರೆ ಕೊಲ್ಲಿ ಕಂಬಳ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya
error: Content is protected !!