25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ, ಸಾಂಸ್ಕೃತಿಕ ಸಂಘ ಮತ್ತು ಕನ್ನಡ ವಿಭಾಗದ ವತಿಯಿಂದ ಭಾರತೀಯ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಹಾಗೂ ರೇಂಜರ್ಸ್ ಘಟಕ , ಭಾರತೀಯ ಯುವ ರೆಡ್ ಕ್ರಾಸ್ ಘಟಕ ಮತ್ತು ಕ್ರೀಡಾ ಸಂಘದ ಸಹಯೋಗದೊಂದಿಗೆ 70ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆ ಯಿಂದ ಆಚರಿಸಲಾಯಿತು.

ನಾಡಗೀತೆಯ ಸಮೂಹ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮಾಧವರವರು ಕನ್ನಡ ನಾಡಿನ ಕಲೆ, ಸಾಹಿತ್ಯ, ಶ್ರೀಮಂತ ಪರಂಪರೆ ಬಗ್ಗೆ ಮಾತನಾಡಿ “ಅಳಿವಿನಂಚಿಗೆ ಸಾಗುತ್ತಿರುವ ಕನ್ನಡ ಭಾಷೆಯನ್ನು ಸಂರಕ್ಷಿಸುವುದು ಕನ್ನಡಿಗರಾದ ನಮ್ಮೆಲ್ಲರ ಕರ್ತವ್ಯ”ಎಂದು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಾತಾಡು ಕನ್ನಡ – ಆಶುಭಾಷಣ ಸ್ಪರ್ಧೆ, ಕನ್ನಡ ನೃತ್ಯಾಂಜಲಿ – ಸಮೂಹ ನೃತ್ಯ ಸ್ಪರ್ಧೆ, ಹಾಗೂ ಕನ್ನಡ ಸಂಗೀತ ಸಿಂಚನ – ಸಮೂಹ ಗಾಯನ ಸ್ಪರ್ಧೆ ಮೊದಲಾದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಧ್ಯಾಪಕ ವೃಂದದವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

ವೇದಿಕೆಯಲ್ಲಿ ಪ್ರಾಂಶುಪಾಲರಾದ ಪ್ರೊ. ಮಾಧವ, ಐ. ಕ್ಯೂ. ಎ. ಸಿ. ಸಂಚಾಲಕರಾದ ಡಾ. ಅವಿತಮರಿಯ ಕ್ವಾಡ್ರಸ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ. ವೈಶಾಲಿ ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ರೇಖಾ ಯು. ಎನ್. ರವರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಕು| ಮಾನಸ ಮತ್ತು ಕು|ವರ್ಷಿಣಿಯವರು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಿರೂಪಿಸಿದರು.
ಕನ್ನಡ ವಿಭಾಗದ ಕು| ಸುನೈನ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕ ವೃಂದದವರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya
error: Content is protected !!