22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಲೆನ್ಸಿ ಪಿಂಟೊ, ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ ಅವಿರೋಧ ಆಯ್ಕೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮುಂದಿನ 2025-30ರ ಅವಧಿಗೆ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆಯು ನ. 4 ರಂದು ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ಚುನಾವಣಾ ಅಧಿಕಾರಿಯವರ ನೇತೃತ್ವದಲ್ಲಿ ನಡೆಯಿತು.

ಸೊಸೈಟಿಯು ಕಳೆದ 10 ವರ್ಷದಿಂದ ಯಶಸ್ವಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದು ಅಧ್ಯಕ್ಷರಾಗಿ ಸತತ ಎರಡು ಅವಧಿಯಲ್ಲಿ ನಿಸ್ವಾರ್ಥ ಸೇವೆಗೈದ ಲೆನ್ಸಿ ಪಿಂಟೊರವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ. , ನಿರ್ದೇಶಕರುಗಳಾಗಿ ವಿವೇಕ್ ವಿನ್ಸೆಂಟ್ ಪಾಯಸ್, ಜೋಯೆಲ್ ಗೋಡ್‌ಫ್ರಿ ಮೆಂಡೋನ್ಸಾ, ಸಿರಿಲ್ ಸಿಕ್ವೇರಾ, ರೊನಾಲ್ಡ್ ಸಿಕ್ವೇರಾ, ಗ್ರೆಗೋರಿ ಸೇರಾ, ಲಿಯೋ ರೊಡ್ರಿಗಸ್, ಶ್ರೀಮತಿ ಸೆಲೆಸ್ತಿನ್ ಡಿ ಸೋಜಾ, ಶ್ರೀಮತಿ ಗ್ರೇಸಿ ರೀಟಾ ರೆಬೆಲ್ಲೊ, ಶ್ರೀಮತಿ ಮೋಲಿ ಫೆರ್ನಾಂಡಿಸ್ ಆಯ್ಕೆಯಾಗಿದ್ದು ಮುಂದಿನ 5 ವರ್ಷಗಳಿಗೆ ಈ ಮಂಡಳಿಯು ಸೊಸೈಟಿಯ ಜವಾಬ್ದಾರಿಯನ್ನು ಹೊತ್ತುಕೊಂಡು ಕಾರ್ಯನಿರ್ವಹಿಸಲಿದೆ.

ಈ ಪ್ರಕ್ರಿಯೆಯನ್ನು ದ.ಕ.ಜಿಲ್ಲಾ ಸಹಕಾರಿ ಸಂಘಗಳ ಉಪ ನಿರ್ದೇಶಕರಾದ ಎಚ್.ಎನ್. ರಮೇಶ್‌ರವರ ನಿರ್ದೇಶನದಂತೆ ಚುನಾವಣಾ ಅಧಿಕಾರಿಯಾಗಿ ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾರವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಸೊಸೈಟಿಯ ಮುಖ್ಯ ಸಲಹೆಗಾರರಾದ ಮೋನಪ್ಪ ಪೂಜಾರಿ ಕಡೆಂತ್ಯ್ಯಾರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ವಲೇರಿಯನ್ ಡಿ ಸೋಜಾರವರು ವಂದಿಸಿದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya
error: Content is protected !!