23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಸರಕಾರದ ಗಮನ ಸೆಳೆಯಲು ಕೋರಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಆರ್ಥಿಕ ವ್ಯವಸ್ಥೆಯಲ್ಲಿ ತನ್ನದೇ ಪಾಲು ಹೊಂದಿರುವ ರಬ್ಬರು ಹಿಂದೆ ಸರಕಾರ ಹೆಚ್ಚಿನ ಮಹತ್ವ ನೀಡಿ ಸಹಾಯಧನ, ಸಾಲ ಹಾಗೂ ಇತರ ಪ್ರೋತ್ಸಾಹ ನೀಡಿದ್ದ ರಬ್ಬರು ಬೆಳೆಯ ವಿಸ್ತೀರ್ಣ ಕಡಿಮೆಯಾಗುತ್ತಿರುವುದು, ಅವಲಂಬಿತ ಕೃಷಿಕರು ಅನುಭವಿಸುತ್ತಿರುವ ಸಮಸ್ಯೆ ಹಾಗೂ ಇದೀಗ ರಬ್ಬರು ಕೃಷಿಯನ್ನು ಹೊಸದಾಗಿ ಪ್ರಾರಂಭಿಸಲು ಆಸಕ್ತಿ ತೋರಿಸದೇ ಇರಲು ಕಾರಣಗಳ ಬಗ್ಗೆ ವಿವರಿಸಲಾಗಿದೆ. ಅಂತೆಯೇ ಕೇರಳ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರೋತ್ಸಾಹಧನ ಯೋಜನೆಯನ್ನು ನಮ್ಮ ರಾಜ್ಯದಲ್ಲಿಯೂ ಜಾರಿಗೊಳಿಸಿ ಬೆಳೆಗಾರರನ್ನು ರಕ್ಷಿಸುವಂತೆ ವಿನಂತಿಸಲಾಯಿತು. ಎಂದು ವೇದಿಕೆಯ ಅಧ್ಯಕ್ಷ ಶ್ರೀಧರ ಜಿ ಭಿಡೆ ತಿಳಿಸಿದರು.

ಈ ಸಂದರ್ಭದಲ್ಲಿ ಸಲಹೆಗಾರರಾದ ಹಿರಿಯ ಅರ್ಥಿಕ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ರಬ್ಬರು ಮಂಡಳಿ ಸದಸ್ಯರಾದ ಮುಳಿಯ ಕೇಶವ ಭಟ್, ಉಪಾಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಗೋಪಾಲಕೃಷ್ಣ ಭಟ್, ಕೃಪಾ, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿಗಳಾದ ರಾಜು ಶೆಟ್ಟಿ ಉಜಿರೆ, ವಿಜಯ ಕೃಷ್ಣ ಪೆರಾಜೆ ಮತ್ತು ಬೆಳ್ತಂಗಡಿ ರಬ್ಬರ್ ಸೊಸೈಟಿ ನಿರ್ದೇಶಕ ಶಾಜಿ ಪಿ ಎ ಶಿಬಾಜೆ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಭಾರತೀಯ ಭೂ ಸೇನೆಯಲ್ಲಿ 16 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಚಂದಪ್ಪ ಗೌಡ: 20 ವರ್ಷಗಳಿಂದ ತುಂಡು ಭೂಮಿಗಾಗಿ ಸರಕಾರಿ ಕಚೇರಿಗಳಿಗೆ ಅಲೆದಾಟ

Suddi Udaya
error: Content is protected !!