23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಅಳದಂಗಡಿ: ಪಿಲ್ಯ ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವು ಶಾಲಾ ಸಂಚಾಲಕ ನಜೀರ್ ಅಹಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ಜರಗಿತು .

ಶ್ರೀಮತಿ ಕುಮುದಾಕ್ಷಿ ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ ಪ್ರಭಾಕರ್ ಶೆಟ್ಟಿಯವರು ಪ್ರಾಸ್ತಾವಿಕ ಮಾತಿನೊಂದಿಗೆ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯ 100% ಫಲಿತಾಂಶಕ್ಕಾಗಿ ಎಲ್ಲಾ ಮಕ್ಕಳನ್ನೂ, ಶಿಕ್ಷಕಿಯರನ್ನು ಅಭಿನಂದಿಸಿದರು.
ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ದಿತೀಕ್ಷ್ ದೀಪೇಶ್, ಶರ್ವಿನ್, ಫೈಹಾ ಮತ್ತು ಆಶೀರ್ ಇವರನ್ನು ವಿಶೇಷವಾಗಿ ಗೌರವಿಸುವುದರ ಜೊತೆಗೆ ಉತ್ತೀರ್ಣರಾದ ಎಲ್ಲರನ್ನೂ ಗೌರವಿಸಲಾಯಿತು.

ವಿಶೇಷ ಆಹ್ವಾನಿತರಾದ ಶಾಜಿ ಕೆ ಕುರಿಯನ್ ರವರು ಅಭಿನಂದಿಸಿ ಮಕ್ಕಳಿಗೆ ಶುಭವನ್ನು ಕೋರಿದರು. ಸಂಚಾಲಕರು ಮಕ್ಕಳನ್ನು ಅಭಿನಂದಿಸುವುದರ ಜೊತೆಗೆ ಇದಕ್ಕೆ ಕಾರಣೀಭೂತರಾದ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಪರಿಶ್ರಮಕ್ಕೆ ಕೃತಜ್ಞತೆಯನ್ನು ಅರ್ಪಿಸಿದರು. ವೇದಿಕೆಯಲ್ಲಿ ಶುಕುರ್ ಸಾಹೇಬ್, ಧನಕೀರ್ತಿ ಜೈನ್, ವೀರೇಂದ್ರ ಕುಮಾರ್ ಜೈನ್, ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶ್ರೀಮತಿ ಸೌಜನ್ಯ ಮಕ್ಕಳನ್ನು ಪರಿಚಯಿಸಿದರು. ಶಿಕ್ಷಕಿಯರಾದ ರೂಪ ನಿರೂಪಿಸಿ, ಶೃತಿ ವಂದಿಸಿದರು.

Related posts

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya
error: Content is protected !!