September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಅಳದಂಗಡಿ: ಪಿಲ್ಯ ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವು ಶಾಲಾ ಸಂಚಾಲಕ ನಜೀರ್ ಅಹಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ಜರಗಿತು .

ಶ್ರೀಮತಿ ಕುಮುದಾಕ್ಷಿ ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ ಪ್ರಭಾಕರ್ ಶೆಟ್ಟಿಯವರು ಪ್ರಾಸ್ತಾವಿಕ ಮಾತಿನೊಂದಿಗೆ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯ 100% ಫಲಿತಾಂಶಕ್ಕಾಗಿ ಎಲ್ಲಾ ಮಕ್ಕಳನ್ನೂ, ಶಿಕ್ಷಕಿಯರನ್ನು ಅಭಿನಂದಿಸಿದರು.
ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ದಿತೀಕ್ಷ್ ದೀಪೇಶ್, ಶರ್ವಿನ್, ಫೈಹಾ ಮತ್ತು ಆಶೀರ್ ಇವರನ್ನು ವಿಶೇಷವಾಗಿ ಗೌರವಿಸುವುದರ ಜೊತೆಗೆ ಉತ್ತೀರ್ಣರಾದ ಎಲ್ಲರನ್ನೂ ಗೌರವಿಸಲಾಯಿತು.

ವಿಶೇಷ ಆಹ್ವಾನಿತರಾದ ಶಾಜಿ ಕೆ ಕುರಿಯನ್ ರವರು ಅಭಿನಂದಿಸಿ ಮಕ್ಕಳಿಗೆ ಶುಭವನ್ನು ಕೋರಿದರು. ಸಂಚಾಲಕರು ಮಕ್ಕಳನ್ನು ಅಭಿನಂದಿಸುವುದರ ಜೊತೆಗೆ ಇದಕ್ಕೆ ಕಾರಣೀಭೂತರಾದ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರ ಪರಿಶ್ರಮಕ್ಕೆ ಕೃತಜ್ಞತೆಯನ್ನು ಅರ್ಪಿಸಿದರು. ವೇದಿಕೆಯಲ್ಲಿ ಶುಕುರ್ ಸಾಹೇಬ್, ಧನಕೀರ್ತಿ ಜೈನ್, ವೀರೇಂದ್ರ ಕುಮಾರ್ ಜೈನ್, ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶ್ರೀಮತಿ ಸೌಜನ್ಯ ಮಕ್ಕಳನ್ನು ಪರಿಚಯಿಸಿದರು. ಶಿಕ್ಷಕಿಯರಾದ ರೂಪ ನಿರೂಪಿಸಿ, ಶೃತಿ ವಂದಿಸಿದರು.

Related posts

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya
error: Content is protected !!