22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಕನ್ನಡ ಸಂವರ್ಧನೆ ಕಾರ್ಯಕ್ರಮ

ಉಜಿರೆ : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಸಂಘದ ವತಿಯಿಂದ ಕನ್ನಡ ಸಂವರ್ಧನೆ ಕಾರ್ಯಕ್ರಮ ಕಾಲೇಜಿನ ಆಡಿಟೋರಿಯಮ್ ನಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ.ವಿಜಯ್ ಲೋಬೋ ವಹಿಸಿ ಕನ್ನಡ ಭಾಷೆಯು ಸಮುದಾಯಗಳ ನಡುವೆ ಭಾಂದವ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿ ಶುಭ ಹಾರೈಹಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಸೇಕ್ರೇಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ವಸಂತ್ ಬಿ.ಶೆಟ್ಟಿ ಮಾತನಾಡಿ ಕನ್ನಡ ಭಾಷೆಯು ಶ್ರೀಮಂತ ಹಾಗೂ ಪ್ರಭುದ್ದ ಭಾಷೆ ವಿದ್ಯಾರ್ಥಿಗಳಾದ ತಾವು ಕನ್ನಡ ಕಾದಂಬರಿಗಳು, ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಬೇಕು. ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ನಮ್ಮೆಲ್ಲರ ಕೊಡುಗೆ ಅಮೂಲ್ಯ ಎಂದು ಹೇಳಿದರು.

ಕನ್ನಡ ಸಂಘದ ನಿರ್ದೇಶಕರಾದ ಅರುಣ್ ಕಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ವೇದಿಕೆಯಲ್ಲಿ ಕನ್ನಡ ಸಂಘದ ಕಾರ್ಯದರ್ಶಿ ಶಾಬಿರ ಉಪಸ್ಥಿತರಿದ್ದರು. ಜೊತೆಕಾರ್ಯದರ್ಶಿ ಕ್ರಿಸ್ಟಿನ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಮನ್ಹ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಕುರಿತ ಹಾಡುಗಳನ್ನು ಹಾಡಿ ಸಂಭ್ರಮಿಸಿದರು.

Related posts

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya
error: Content is protected !!