22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ, ಸಾಂಸ್ಕೃತಿಕ ಸಂಘ ಮತ್ತು ಕನ್ನಡ ವಿಭಾಗದ ವತಿಯಿಂದ ಭಾರತೀಯ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಹಾಗೂ ರೇಂಜರ್ಸ್ ಘಟಕ , ಭಾರತೀಯ ಯುವ ರೆಡ್ ಕ್ರಾಸ್ ಘಟಕ ಮತ್ತು ಕ್ರೀಡಾ ಸಂಘದ ಸಹಯೋಗದೊಂದಿಗೆ 70ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆ ಯಿಂದ ಆಚರಿಸಲಾಯಿತು.

ನಾಡಗೀತೆಯ ಸಮೂಹ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮಾಧವರವರು ಕನ್ನಡ ನಾಡಿನ ಕಲೆ, ಸಾಹಿತ್ಯ, ಶ್ರೀಮಂತ ಪರಂಪರೆ ಬಗ್ಗೆ ಮಾತನಾಡಿ “ಅಳಿವಿನಂಚಿಗೆ ಸಾಗುತ್ತಿರುವ ಕನ್ನಡ ಭಾಷೆಯನ್ನು ಸಂರಕ್ಷಿಸುವುದು ಕನ್ನಡಿಗರಾದ ನಮ್ಮೆಲ್ಲರ ಕರ್ತವ್ಯ”ಎಂದು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಾತಾಡು ಕನ್ನಡ – ಆಶುಭಾಷಣ ಸ್ಪರ್ಧೆ, ಕನ್ನಡ ನೃತ್ಯಾಂಜಲಿ – ಸಮೂಹ ನೃತ್ಯ ಸ್ಪರ್ಧೆ, ಹಾಗೂ ಕನ್ನಡ ಸಂಗೀತ ಸಿಂಚನ – ಸಮೂಹ ಗಾಯನ ಸ್ಪರ್ಧೆ ಮೊದಲಾದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಧ್ಯಾಪಕ ವೃಂದದವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

ವೇದಿಕೆಯಲ್ಲಿ ಪ್ರಾಂಶುಪಾಲರಾದ ಪ್ರೊ. ಮಾಧವ, ಐ. ಕ್ಯೂ. ಎ. ಸಿ. ಸಂಚಾಲಕರಾದ ಡಾ. ಅವಿತಮರಿಯ ಕ್ವಾಡ್ರಸ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ. ವೈಶಾಲಿ ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ರೇಖಾ ಯು. ಎನ್. ರವರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಕು| ಮಾನಸ ಮತ್ತು ಕು|ವರ್ಷಿಣಿಯವರು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಿರೂಪಿಸಿದರು.
ಕನ್ನಡ ವಿಭಾಗದ ಕು| ಸುನೈನ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕ ವೃಂದದವರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya
error: Content is protected !!