September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ, ಸಾಂಸ್ಕೃತಿಕ ಸಂಘ ಮತ್ತು ಕನ್ನಡ ವಿಭಾಗದ ವತಿಯಿಂದ ಭಾರತೀಯ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಹಾಗೂ ರೇಂಜರ್ಸ್ ಘಟಕ , ಭಾರತೀಯ ಯುವ ರೆಡ್ ಕ್ರಾಸ್ ಘಟಕ ಮತ್ತು ಕ್ರೀಡಾ ಸಂಘದ ಸಹಯೋಗದೊಂದಿಗೆ 70ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆ ಯಿಂದ ಆಚರಿಸಲಾಯಿತು.

ನಾಡಗೀತೆಯ ಸಮೂಹ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮಾಧವರವರು ಕನ್ನಡ ನಾಡಿನ ಕಲೆ, ಸಾಹಿತ್ಯ, ಶ್ರೀಮಂತ ಪರಂಪರೆ ಬಗ್ಗೆ ಮಾತನಾಡಿ “ಅಳಿವಿನಂಚಿಗೆ ಸಾಗುತ್ತಿರುವ ಕನ್ನಡ ಭಾಷೆಯನ್ನು ಸಂರಕ್ಷಿಸುವುದು ಕನ್ನಡಿಗರಾದ ನಮ್ಮೆಲ್ಲರ ಕರ್ತವ್ಯ”ಎಂದು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಾತಾಡು ಕನ್ನಡ – ಆಶುಭಾಷಣ ಸ್ಪರ್ಧೆ, ಕನ್ನಡ ನೃತ್ಯಾಂಜಲಿ – ಸಮೂಹ ನೃತ್ಯ ಸ್ಪರ್ಧೆ, ಹಾಗೂ ಕನ್ನಡ ಸಂಗೀತ ಸಿಂಚನ – ಸಮೂಹ ಗಾಯನ ಸ್ಪರ್ಧೆ ಮೊದಲಾದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಧ್ಯಾಪಕ ವೃಂದದವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

ವೇದಿಕೆಯಲ್ಲಿ ಪ್ರಾಂಶುಪಾಲರಾದ ಪ್ರೊ. ಮಾಧವ, ಐ. ಕ್ಯೂ. ಎ. ಸಿ. ಸಂಚಾಲಕರಾದ ಡಾ. ಅವಿತಮರಿಯ ಕ್ವಾಡ್ರಸ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ. ವೈಶಾಲಿ ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ರೇಖಾ ಯು. ಎನ್. ರವರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಕು| ಮಾನಸ ಮತ್ತು ಕು|ವರ್ಷಿಣಿಯವರು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಿರೂಪಿಸಿದರು.
ಕನ್ನಡ ವಿಭಾಗದ ಕು| ಸುನೈನ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕ ವೃಂದದವರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ, ಮಹಿಳಾ ಘಟಕ, ಯುವ ವೇದಿಕೆ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!