25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ವಹಿಸಿ ಕನ್ನಡ ನಾಡು ನುಡಿ ಯ ಮಹತ್ವ ದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.

ಮುಖ್ಯ ಅತಿಥಿಯಾಗಿ ಸ್ಥಳೀಯ ಪ್ರಗತಿಪರ ಕೃಷಿಕ ರಾಮನಂದ ನಾಯಕ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ಮಾತನಾಡಿ ಕನ್ನಡ ನಾಡು ಬೆಳೆದು ಬಂದ ಹಾದಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಮೇಲಿನಡ್ಕದ ಮೋಹನ್ ಭಟ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಸ್ವಾಗತಿಸಿ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾದ ಶ್ರೀಮತಿ ಶೀಲಾ ಎನ್ ಧನ್ಯವಾದವಿತ್ತರು. ಶಾಲಾ ಶಿಕ್ಷಕಿಯಾದ ಕುಮಾರಿ ಜತಿಕ್ಷ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ಪಶ್ಚಿಮ ಬಂಗಾಳದ ಚಾರಿತ್ರಿಕ ಗೆಲುವು ಬಿಜೆಪಿಯ ಸೈದಾಂತಿಕ ನಿಲುವು ಮತ್ತು ಪ್ರಧಾನಿ ಮೋದಿಯವರ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯ: ಸಂಸದ ಕ್ಯಾ. ಚೌಟ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya
error: Content is protected !!