23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಲೆನ್ಸಿ ಪಿಂಟೊ, ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ ಅವಿರೋಧ ಆಯ್ಕೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮುಂದಿನ 2025-30ರ ಅವಧಿಗೆ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆಯು ನ. 4 ರಂದು ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ಚುನಾವಣಾ ಅಧಿಕಾರಿಯವರ ನೇತೃತ್ವದಲ್ಲಿ ನಡೆಯಿತು.

ಸೊಸೈಟಿಯು ಕಳೆದ 10 ವರ್ಷದಿಂದ ಯಶಸ್ವಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದು ಅಧ್ಯಕ್ಷರಾಗಿ ಸತತ ಎರಡು ಅವಧಿಯಲ್ಲಿ ನಿಸ್ವಾರ್ಥ ಸೇವೆಗೈದ ಲೆನ್ಸಿ ಪಿಂಟೊರವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ. , ನಿರ್ದೇಶಕರುಗಳಾಗಿ ವಿವೇಕ್ ವಿನ್ಸೆಂಟ್ ಪಾಯಸ್, ಜೋಯೆಲ್ ಗೋಡ್‌ಫ್ರಿ ಮೆಂಡೋನ್ಸಾ, ಸಿರಿಲ್ ಸಿಕ್ವೇರಾ, ರೊನಾಲ್ಡ್ ಸಿಕ್ವೇರಾ, ಗ್ರೆಗೋರಿ ಸೇರಾ, ಲಿಯೋ ರೊಡ್ರಿಗಸ್, ಶ್ರೀಮತಿ ಸೆಲೆಸ್ತಿನ್ ಡಿ ಸೋಜಾ, ಶ್ರೀಮತಿ ಗ್ರೇಸಿ ರೀಟಾ ರೆಬೆಲ್ಲೊ, ಶ್ರೀಮತಿ ಮೋಲಿ ಫೆರ್ನಾಂಡಿಸ್ ಆಯ್ಕೆಯಾಗಿದ್ದು ಮುಂದಿನ 5 ವರ್ಷಗಳಿಗೆ ಈ ಮಂಡಳಿಯು ಸೊಸೈಟಿಯ ಜವಾಬ್ದಾರಿಯನ್ನು ಹೊತ್ತುಕೊಂಡು ಕಾರ್ಯನಿರ್ವಹಿಸಲಿದೆ.

ಈ ಪ್ರಕ್ರಿಯೆಯನ್ನು ದ.ಕ.ಜಿಲ್ಲಾ ಸಹಕಾರಿ ಸಂಘಗಳ ಉಪ ನಿರ್ದೇಶಕರಾದ ಎಚ್.ಎನ್. ರಮೇಶ್‌ರವರ ನಿರ್ದೇಶನದಂತೆ ಚುನಾವಣಾ ಅಧಿಕಾರಿಯಾಗಿ ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾರವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಸೊಸೈಟಿಯ ಮುಖ್ಯ ಸಲಹೆಗಾರರಾದ ಮೋನಪ್ಪ ಪೂಜಾರಿ ಕಡೆಂತ್ಯ್ಯಾರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ವಲೇರಿಯನ್ ಡಿ ಸೋಜಾರವರು ವಂದಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya

ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ

Suddi Udaya

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya
error: Content is protected !!