22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಲೆನ್ಸಿ ಪಿಂಟೊ, ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ ಅವಿರೋಧ ಆಯ್ಕೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮುಂದಿನ 2025-30ರ ಅವಧಿಗೆ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆಯು ನ. 4 ರಂದು ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ಚುನಾವಣಾ ಅಧಿಕಾರಿಯವರ ನೇತೃತ್ವದಲ್ಲಿ ನಡೆಯಿತು.

ಸೊಸೈಟಿಯು ಕಳೆದ 10 ವರ್ಷದಿಂದ ಯಶಸ್ವಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದು ಅಧ್ಯಕ್ಷರಾಗಿ ಸತತ ಎರಡು ಅವಧಿಯಲ್ಲಿ ನಿಸ್ವಾರ್ಥ ಸೇವೆಗೈದ ಲೆನ್ಸಿ ಪಿಂಟೊರವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ. , ನಿರ್ದೇಶಕರುಗಳಾಗಿ ವಿವೇಕ್ ವಿನ್ಸೆಂಟ್ ಪಾಯಸ್, ಜೋಯೆಲ್ ಗೋಡ್‌ಫ್ರಿ ಮೆಂಡೋನ್ಸಾ, ಸಿರಿಲ್ ಸಿಕ್ವೇರಾ, ರೊನಾಲ್ಡ್ ಸಿಕ್ವೇರಾ, ಗ್ರೆಗೋರಿ ಸೇರಾ, ಲಿಯೋ ರೊಡ್ರಿಗಸ್, ಶ್ರೀಮತಿ ಸೆಲೆಸ್ತಿನ್ ಡಿ ಸೋಜಾ, ಶ್ರೀಮತಿ ಗ್ರೇಸಿ ರೀಟಾ ರೆಬೆಲ್ಲೊ, ಶ್ರೀಮತಿ ಮೋಲಿ ಫೆರ್ನಾಂಡಿಸ್ ಆಯ್ಕೆಯಾಗಿದ್ದು ಮುಂದಿನ 5 ವರ್ಷಗಳಿಗೆ ಈ ಮಂಡಳಿಯು ಸೊಸೈಟಿಯ ಜವಾಬ್ದಾರಿಯನ್ನು ಹೊತ್ತುಕೊಂಡು ಕಾರ್ಯನಿರ್ವಹಿಸಲಿದೆ.

ಈ ಪ್ರಕ್ರಿಯೆಯನ್ನು ದ.ಕ.ಜಿಲ್ಲಾ ಸಹಕಾರಿ ಸಂಘಗಳ ಉಪ ನಿರ್ದೇಶಕರಾದ ಎಚ್.ಎನ್. ರಮೇಶ್‌ರವರ ನಿರ್ದೇಶನದಂತೆ ಚುನಾವಣಾ ಅಧಿಕಾರಿಯಾಗಿ ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾರವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಸೊಸೈಟಿಯ ಮುಖ್ಯ ಸಲಹೆಗಾರರಾದ ಮೋನಪ್ಪ ಪೂಜಾರಿ ಕಡೆಂತ್ಯ್ಯಾರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ವಲೇರಿಯನ್ ಡಿ ಸೋಜಾರವರು ವಂದಿಸಿದರು.

Related posts

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya
error: Content is protected !!