July 23, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

ಮುರುಗೋಳಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನ.೫ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತೀ ಬೆಂಬಲಿತ ೧೨ ಮಂದಿ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಪರಭಾವಗೊಳಿಸಿದ್ದಾರೆ. ಒಟ್ಟು ೧೨ ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಸಾಮಾನ್ಯ ಸ್ಥಾನದಿಂದ ೬ ಮಂದಿ, ಅನೂಸೂಚಿತ ಜಾತಿ ಹಾಗೂ ಪಂಗಡ ಮೀಸಲುವಿನಿಂದ, ಹಿಂದುಳಿದ ವರ್ಗ “ಎ” ಹಾಗೂ “ಬಿ” ಮೀಸಲು ಸ್ಥಾನದಿಂದ ತಲಾ ಒಂದರAತೆ ಹಾಗೂ ಮಹಿಳಾ ಮೀಸಲು ಎರಡು ಸ್ಥಾನಗಳಿಗೆ ಸ್ಪರ್ಧೆ ನಡೆದಿದ್ದು ಅಂತಿಮ ಕಣದಲ್ಲಿ ೨೪ ಅಭ್ಯರ್ಥಿಗಳಿದ್ದರು. ನ.೫ರಂದು ಬೆಳಗ್ಗೆ ೯ರಿಂದ ಸಂಜೆ ೪ರವರೆಗೆ ಬಾರ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮತದಾನ ನಡೆದಿದ್ದು ಒಟ್ಟು ೧೩೨೨ ಮಂದಿ ಮತದಾರರ ಪೈಕಿ ೧೧೮೨ ಮತಗಳು ಚಲಾವಣೆಗೊಂಡು ಶೇ.೮೯.೪೦ರಷ್ಟು ಮತದಾನ ನಡೆದಿದೆ. ಚುನಾವಣಾಧಿಕಾರಿಯಾಗಿ ಸಿಡಿಒ ಪ್ರತಿಮಾ ಹಾಗೂ ಸಹಾಯಕ ಚುನಾವಣಾಧಿಕಾರಿ ಸತೀಶ್ ಟಿ. ಕಾರ್ಯನಿರ್ವಹಿಸಿದರು, ಸಿಬ್ಬಂದಿಗಳು ಸಹಕರಿಸಿದರು.

ಸಾಮಾನ್ಯ ಕೇತ್ರದಿಂದ ಸ್ಪರ್ಧಿಸಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಹಾಲಿ ಅಧ್ಯಕ್ಷರಾದ ಪ್ರಸನ್ನ ಗೌಡ ಎನ್, ಪ್ರವೀಣ ರೈ ಪಿ., ಪ್ರಶಾಂತ್ ಪೈ, ಹಾಲಿ ನಿರ್ದೇಶಕ ಚಂದ್ರಶೇಖರ್ ಕುಂಡಡ್ಕ, ಹರ್ಷಿತ್ ಪೂಜಾರಿ ಕಲಾಯ ಹಾಗೂ ಹಾಲಿ ನಿರ್ದೇಶಕ ಮೋಹನ್ ಗೌಡ ಅಜಿರ, ಹಿಂದುಳಿದ ವರ್ಗ”ಎ”ನಿಂದ ಹಾಲಿ ನಿರ್ದೇಶಕ ಶೇಸಪ್ಪ ಸಾಲಿಯಾನ್, ಹಿಂದುಳಿದ ವರ್ಗ “ಬಿ”ನಿಂದ ಹಾಲಿ ನಿರ್ದೇಶಕ ರಾಜೇಶ್ ರೈ ಹೆನ್ನಡ್ಕ, ಮಹಿಳಾ ಮೀಸಲು ಹಾಲಿ ನಿರ್ದೇಶಕಿ ಕೇತ್ರದಿಂದ ಸವಿತಾ ವೆಂಕಟೇಶ್ ಹಾಗೂ ಹೇಮಾವತಿ ಸುರೇಶ್ ಹೇರಾಜೆ, ಪರಿಶಿಷ್ಟ ಪಂಗಡದಿAದ ಹಾಲಿ ಉಪಾಧ್ಯಕ್ಷ ಶಿವಾರಮ್ ಕೆಳಗಿನಂಗಡಿ ಹಾಗೂ ಪರಿಶಿಷ್ಟ ಜಾತಿಯಿಂದ ಹಾಲಿ ನಿರ್ದೇಶಕ ಸುರೇಶ್ ಸುಣ್ಣಾಜೆ ಅಭೂತಪೂರ್ವ ಮತಗಳಿಂದ ವಿಜಯಗಳಿಸಿದ್ದಾರೆ.

Related posts

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!