23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

ಮುರುಗೋಳಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನ.೫ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತೀ ಬೆಂಬಲಿತ ೧೨ ಮಂದಿ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಪರಭಾವಗೊಳಿಸಿದ್ದಾರೆ. ಒಟ್ಟು ೧೨ ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಸಾಮಾನ್ಯ ಸ್ಥಾನದಿಂದ ೬ ಮಂದಿ, ಅನೂಸೂಚಿತ ಜಾತಿ ಹಾಗೂ ಪಂಗಡ ಮೀಸಲುವಿನಿಂದ, ಹಿಂದುಳಿದ ವರ್ಗ “ಎ” ಹಾಗೂ “ಬಿ” ಮೀಸಲು ಸ್ಥಾನದಿಂದ ತಲಾ ಒಂದರAತೆ ಹಾಗೂ ಮಹಿಳಾ ಮೀಸಲು ಎರಡು ಸ್ಥಾನಗಳಿಗೆ ಸ್ಪರ್ಧೆ ನಡೆದಿದ್ದು ಅಂತಿಮ ಕಣದಲ್ಲಿ ೨೪ ಅಭ್ಯರ್ಥಿಗಳಿದ್ದರು. ನ.೫ರಂದು ಬೆಳಗ್ಗೆ ೯ರಿಂದ ಸಂಜೆ ೪ರವರೆಗೆ ಬಾರ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮತದಾನ ನಡೆದಿದ್ದು ಒಟ್ಟು ೧೩೨೨ ಮಂದಿ ಮತದಾರರ ಪೈಕಿ ೧೧೮೨ ಮತಗಳು ಚಲಾವಣೆಗೊಂಡು ಶೇ.೮೯.೪೦ರಷ್ಟು ಮತದಾನ ನಡೆದಿದೆ. ಚುನಾವಣಾಧಿಕಾರಿಯಾಗಿ ಸಿಡಿಒ ಪ್ರತಿಮಾ ಹಾಗೂ ಸಹಾಯಕ ಚುನಾವಣಾಧಿಕಾರಿ ಸತೀಶ್ ಟಿ. ಕಾರ್ಯನಿರ್ವಹಿಸಿದರು, ಸಿಬ್ಬಂದಿಗಳು ಸಹಕರಿಸಿದರು.

ಸಾಮಾನ್ಯ ಕೇತ್ರದಿಂದ ಸ್ಪರ್ಧಿಸಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಹಾಲಿ ಅಧ್ಯಕ್ಷರಾದ ಪ್ರಸನ್ನ ಗೌಡ ಎನ್, ಪ್ರವೀಣ ರೈ ಪಿ., ಪ್ರಶಾಂತ್ ಪೈ, ಹಾಲಿ ನಿರ್ದೇಶಕ ಚಂದ್ರಶೇಖರ್ ಕುಂಡಡ್ಕ, ಹರ್ಷಿತ್ ಪೂಜಾರಿ ಕಲಾಯ ಹಾಗೂ ಹಾಲಿ ನಿರ್ದೇಶಕ ಮೋಹನ್ ಗೌಡ ಅಜಿರ, ಹಿಂದುಳಿದ ವರ್ಗ”ಎ”ನಿಂದ ಹಾಲಿ ನಿರ್ದೇಶಕ ಶೇಸಪ್ಪ ಸಾಲಿಯಾನ್, ಹಿಂದುಳಿದ ವರ್ಗ “ಬಿ”ನಿಂದ ಹಾಲಿ ನಿರ್ದೇಶಕ ರಾಜೇಶ್ ರೈ ಹೆನ್ನಡ್ಕ, ಮಹಿಳಾ ಮೀಸಲು ಹಾಲಿ ನಿರ್ದೇಶಕಿ ಕೇತ್ರದಿಂದ ಸವಿತಾ ವೆಂಕಟೇಶ್ ಹಾಗೂ ಹೇಮಾವತಿ ಸುರೇಶ್ ಹೇರಾಜೆ, ಪರಿಶಿಷ್ಟ ಪಂಗಡದಿAದ ಹಾಲಿ ಉಪಾಧ್ಯಕ್ಷ ಶಿವಾರಮ್ ಕೆಳಗಿನಂಗಡಿ ಹಾಗೂ ಪರಿಶಿಷ್ಟ ಜಾತಿಯಿಂದ ಹಾಲಿ ನಿರ್ದೇಶಕ ಸುರೇಶ್ ಸುಣ್ಣಾಜೆ ಅಭೂತಪೂರ್ವ ಮತಗಳಿಂದ ವಿಜಯಗಳಿಸಿದ್ದಾರೆ.

Related posts

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya
error: Content is protected !!