July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ರವರು ಇಂದು ಪಟ್ಟಾಭಿಶಕ್ತರಾಗಿದ್ದಾರೆ.

ಬೆಳ್ತಂಗಡಿ ಧಮ೯ಪ್ರಾಂತ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೀರೋ ಮಲಬಾರ್ ಕಥೋಲಿಕ ಧರ್ಮಸಭೆಯ ಮಹಾ ಧರ್ಮಾಧ್ಯಕ್ಷರಾದ ಅತೀ ವಂದನೀಯ ರಾಫೇಲ್ ತಟ್ಟಿಲ್ ರವರು ಮುಖ್ಯ ಅರ್ಚಕರಾಗಿ, ಆರ್ಚ್ ಬಿಷಪ್ ಅತೀ ವಂದನೀಯ ಜೋಸೆಫ್ ಪಾಮ್ಪ್ಲಾನಿ ತಲಶೇರಿ ಮೆಟ್ರೋ ಪೊಲಿಟನ್ ಧರ್ಮಪ್ರಾಂತ್ಯ ರವರ ಹಾಗೂ ಭಾರತದ ವಿವಿಧ ಕಡೆಗಳಿಂದ ಆಗಮಿಸಿದ ನಲವತ್ತನಾಲ್ಕು ಧರ್ಮಾಧ್ಯಕ್ಷರ ಪುಣ್ಯಸಾನಿಧ್ಯದಲ್ಲಿ ಪಟ್ಟಾಭಿಷೇಕವು ನೆರವೇರಿತು. ಭಾರತದ ವಿವಿಧ ಕಡೆಗಳಿಂದ ನಾಲ್ನೂರಕ್ಕೂ ಮಿಕ್ಕಿ ಧರ್ಮಗುರುಗಳು, ಧರ್ಮ ಭಗಿನಿಯರು ಮತ್ತು ನಾಲ್ಕು ಸಾವಿರಕ್ಕೂ ಮೀರಿದ ಕ್ರೈಸ್ತಬಾಂಧವರು ಪಾಲ್ಗೊಂಡರು.

ಪಟ್ಟಾಭಿಷೇಕದ ನಂತರದ ಸಾರ್ವಜನಿಕ ಸಮ್ಮೇಳನದಲ್ಲಿ ನೂತನ ಧರ್ಮಾಧ್ಯಕ್ಷರಿಗೆ ಅಭಿನಂದನೆಗಳು ಹಾಗೂ ನಿವೃತ್ತರಾಗುವ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿಯವರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಸಮ್ಮೇಳನದಲ್ಲಿ ಮಾತನಾಡಿದ ಭಾರತ ಕಥೋಲಿಕ್ ಧರ್ಮಧ್ಯಕ್ಷರುಗಳ ಸಮ್ಮೇಳನದ ಅಧ್ಯಕ್ಷ ಅತೀ ವಂದನೀಯ ಆಂಡ್ರೂಸ್ ಥಾಯತ್,” ಅತೀ ವಂದನೀಯ ಜೇಮ್ಸ್ ರವರು ಜನಹಿತ ಕೆಲಸಗಳನ್ನು ಮಂಚೂಣಿಯಲ್ಲಿ ಇರುವವರು, ಇದರಿಂದ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ಈ ನಾಡಿಗೆ ಒಳಿತಾಗುವುದು ಖಚಿತ” ಎಂದರು. “ಕಳೆದ 26 ವರ್ಷಗಳಲ್ಲಿ ಮಾಡಿದ ಅತ್ಯಂತ ಕಠಿಣ ಸಮಯದಲ್ಲಿ ತ್ಯಾಗ ಪ್ರೀತಿ ನಿಷ್ಠೆಯಿಂದ ಮಾಡಿದ ಸೇವೆ ಬಣ್ಣಿಸಲು ಅಸಾಧ್ಯ” ಎಂದು ಆಂಡ್ರಿಯಾ ಫ್ರಾನ್ಸಿಯಾ ಹೇಳಿದರು.

Related posts

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya
error: Content is protected !!