23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ರವರು ಇಂದು ಪಟ್ಟಾಭಿಶಕ್ತರಾಗಿದ್ದಾರೆ.

ಬೆಳ್ತಂಗಡಿ ಧಮ೯ಪ್ರಾಂತ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೀರೋ ಮಲಬಾರ್ ಕಥೋಲಿಕ ಧರ್ಮಸಭೆಯ ಮಹಾ ಧರ್ಮಾಧ್ಯಕ್ಷರಾದ ಅತೀ ವಂದನೀಯ ರಾಫೇಲ್ ತಟ್ಟಿಲ್ ರವರು ಮುಖ್ಯ ಅರ್ಚಕರಾಗಿ, ಆರ್ಚ್ ಬಿಷಪ್ ಅತೀ ವಂದನೀಯ ಜೋಸೆಫ್ ಪಾಮ್ಪ್ಲಾನಿ ತಲಶೇರಿ ಮೆಟ್ರೋ ಪೊಲಿಟನ್ ಧರ್ಮಪ್ರಾಂತ್ಯ ರವರ ಹಾಗೂ ಭಾರತದ ವಿವಿಧ ಕಡೆಗಳಿಂದ ಆಗಮಿಸಿದ ನಲವತ್ತನಾಲ್ಕು ಧರ್ಮಾಧ್ಯಕ್ಷರ ಪುಣ್ಯಸಾನಿಧ್ಯದಲ್ಲಿ ಪಟ್ಟಾಭಿಷೇಕವು ನೆರವೇರಿತು. ಭಾರತದ ವಿವಿಧ ಕಡೆಗಳಿಂದ ನಾಲ್ನೂರಕ್ಕೂ ಮಿಕ್ಕಿ ಧರ್ಮಗುರುಗಳು, ಧರ್ಮ ಭಗಿನಿಯರು ಮತ್ತು ನಾಲ್ಕು ಸಾವಿರಕ್ಕೂ ಮೀರಿದ ಕ್ರೈಸ್ತಬಾಂಧವರು ಪಾಲ್ಗೊಂಡರು.

ಪಟ್ಟಾಭಿಷೇಕದ ನಂತರದ ಸಾರ್ವಜನಿಕ ಸಮ್ಮೇಳನದಲ್ಲಿ ನೂತನ ಧರ್ಮಾಧ್ಯಕ್ಷರಿಗೆ ಅಭಿನಂದನೆಗಳು ಹಾಗೂ ನಿವೃತ್ತರಾಗುವ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿಯವರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಸಮ್ಮೇಳನದಲ್ಲಿ ಮಾತನಾಡಿದ ಭಾರತ ಕಥೋಲಿಕ್ ಧರ್ಮಧ್ಯಕ್ಷರುಗಳ ಸಮ್ಮೇಳನದ ಅಧ್ಯಕ್ಷ ಅತೀ ವಂದನೀಯ ಆಂಡ್ರೂಸ್ ಥಾಯತ್,” ಅತೀ ವಂದನೀಯ ಜೇಮ್ಸ್ ರವರು ಜನಹಿತ ಕೆಲಸಗಳನ್ನು ಮಂಚೂಣಿಯಲ್ಲಿ ಇರುವವರು, ಇದರಿಂದ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ಈ ನಾಡಿಗೆ ಒಳಿತಾಗುವುದು ಖಚಿತ” ಎಂದರು. “ಕಳೆದ 26 ವರ್ಷಗಳಲ್ಲಿ ಮಾಡಿದ ಅತ್ಯಂತ ಕಠಿಣ ಸಮಯದಲ್ಲಿ ತ್ಯಾಗ ಪ್ರೀತಿ ನಿಷ್ಠೆಯಿಂದ ಮಾಡಿದ ಸೇವೆ ಬಣ್ಣಿಸಲು ಅಸಾಧ್ಯ” ಎಂದು ಆಂಡ್ರಿಯಾ ಫ್ರಾನ್ಸಿಯಾ ಹೇಳಿದರು.

Related posts

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya
error: Content is protected !!