March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

ಧರ್ಮಸ್ಥಳ ಗ್ರಾಮದ ನೀರಚಿಲುಮೆ ಎಂಬಲ್ಲಿ ವೀಲ್ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ಜಗದೀಶ್ ನಾಯ್ಕ ಎಂಬವರಿಗೆ ಧರ್ಮಸ್ಥಳದ ಸಿ.ಎ ಬ್ಯಾಂಕ್ ಆಡಳಿತ ಮಂಡಳಿ ನೆರವಾಗಿದೆ.

ಆಕಸ್ಮಿಕ ಅವಘಡವೊಂದರಲ್ಲಿ ತನ್ನ ಸೊಂಟದ ಕೆಳಗಿನ ಶಕ್ತಿಯನ್ನೇ ಕಳೆದುಕೊಂಡರೂ ಕೂಡಾ ಛಲ ಬಿಡದ ತ್ರಿವಿಕ್ರಮನಂತೆ ಸ್ವಾಭಿಮಾನದ ಬದುಕು ಕಟ್ಟಿಕೊಂಡು ಸಣ್ಣ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡ ಜೀವ ಅದು. ಇವರ ವಿಷಯಗಳ ಬಗ್ಗೆ ಶ್ಯಾಮ್ ಪ್ರಸಾದ್ ಮತ್ತು ಶೈನಿ ಕಾಮತ್ ದಂಪತಿಯ ‘ರೈಡಿಂಗ್ ಜೋಡಿಗಳು’ ಎಂಬ ಯೂಟ್ಯೂಬ್ ನಲ್ಲಿ ಕಳೆದ ಕೆಲ ತಿಂಗಳ ಹಿಂದೆ ಪ್ರಸಾರ ಮಾಡಿದ್ದರು. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿತ್ತು ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರು ಜಗದೀಶ್ ಅವರ ವ್ಯಾಪಾರಕ್ಕೆ ಮಳೆಗಾಳಿಗಳಿಂದ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಸಿಎ ಬ್ಯಾಂಕ್‌ ಅಧ್ಯಕ್ಷ ಪ್ರೀತಮ್ ಅವರನ್ನು ಸಂಪರ್ಕಿಸಿ ಏನಾದರೂ ವ್ಯವಸ್ಥೆ ಮಾಡುವಂತೆ ತಿಳಿಸಿದ್ದರು.

ಸದಾ ವಿಭಿನ್ನ ಹಾಗೂ ವಿಶಿಷ್ಟ ಯೋಜನೆಗಳ ಮೂಲಕ ಮಾದರಿ ಕಾರ್ಯಕ್ರಮಗಳ ಮೂಲಕ ಜನಾನುರಾಗಿ ಆಗಿರುವ ಪ್ರೀತಮ್ ಅವರು ತಮ್ಮ ಆಡಳಿತ ವರ್ಗ ಹಾಗೂ ಸಿಬ್ಬಂದಿಗಳ ಜೊತೆಗೆ ಚರ್ಚಿಸಿ ಜಗದೀಶ್ ಅವರಿಗೆ ವ್ಯಾಪಾರಕ್ಕೆ ಸುರಕ್ಷಿತವಾದ ವ್ಯವಸ್ಥೆ ಮಾಡಿರುತ್ತಾರೆ. ಬೆಳ್ತಂಗಡಿ ಶಾಸಕರ ಮೂಲಕ ಉದ್ಘಾಟನೆಗೊಂಡಿದ್ದು ಜಗದೀಶ್ ಅವರ ಮುಖದಲ್ಲಿನ ಮುಗುಲ್ನಗು ಎಲ್ಲವನ್ನೂ ಹೇಳುತಿತ್ತು.

ಸಮಾಜಮುಖಿ ಚಿಂತನೆಗಳಿಂದ ಸಹಕಾರಿ ಸಂಘವೊಂದು ಹೇಗೆ ಜನಮನ್ನಣೆ ಗಳಿಸಬಹುದು ಎಂಬುದಕ್ಕೆ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಂಘ ಮಾದರಿ ನಿದರ್ಶನವಾಗಿದೆ.

Related posts

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya
error: Content is protected !!