23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

ಧರ್ಮಸ್ಥಳ ಗ್ರಾಮದ ನೀರಚಿಲುಮೆ ಎಂಬಲ್ಲಿ ವೀಲ್ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ಜಗದೀಶ್ ನಾಯ್ಕ ಎಂಬವರಿಗೆ ಧರ್ಮಸ್ಥಳದ ಸಿ.ಎ ಬ್ಯಾಂಕ್ ಆಡಳಿತ ಮಂಡಳಿ ನೆರವಾಗಿದೆ.

ಆಕಸ್ಮಿಕ ಅವಘಡವೊಂದರಲ್ಲಿ ತನ್ನ ಸೊಂಟದ ಕೆಳಗಿನ ಶಕ್ತಿಯನ್ನೇ ಕಳೆದುಕೊಂಡರೂ ಕೂಡಾ ಛಲ ಬಿಡದ ತ್ರಿವಿಕ್ರಮನಂತೆ ಸ್ವಾಭಿಮಾನದ ಬದುಕು ಕಟ್ಟಿಕೊಂಡು ಸಣ್ಣ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡ ಜೀವ ಅದು. ಇವರ ವಿಷಯಗಳ ಬಗ್ಗೆ ಶ್ಯಾಮ್ ಪ್ರಸಾದ್ ಮತ್ತು ಶೈನಿ ಕಾಮತ್ ದಂಪತಿಯ ‘ರೈಡಿಂಗ್ ಜೋಡಿಗಳು’ ಎಂಬ ಯೂಟ್ಯೂಬ್ ನಲ್ಲಿ ಕಳೆದ ಕೆಲ ತಿಂಗಳ ಹಿಂದೆ ಪ್ರಸಾರ ಮಾಡಿದ್ದರು. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿತ್ತು ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರು ಜಗದೀಶ್ ಅವರ ವ್ಯಾಪಾರಕ್ಕೆ ಮಳೆಗಾಳಿಗಳಿಂದ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಸಿಎ ಬ್ಯಾಂಕ್‌ ಅಧ್ಯಕ್ಷ ಪ್ರೀತಮ್ ಅವರನ್ನು ಸಂಪರ್ಕಿಸಿ ಏನಾದರೂ ವ್ಯವಸ್ಥೆ ಮಾಡುವಂತೆ ತಿಳಿಸಿದ್ದರು.

ಸದಾ ವಿಭಿನ್ನ ಹಾಗೂ ವಿಶಿಷ್ಟ ಯೋಜನೆಗಳ ಮೂಲಕ ಮಾದರಿ ಕಾರ್ಯಕ್ರಮಗಳ ಮೂಲಕ ಜನಾನುರಾಗಿ ಆಗಿರುವ ಪ್ರೀತಮ್ ಅವರು ತಮ್ಮ ಆಡಳಿತ ವರ್ಗ ಹಾಗೂ ಸಿಬ್ಬಂದಿಗಳ ಜೊತೆಗೆ ಚರ್ಚಿಸಿ ಜಗದೀಶ್ ಅವರಿಗೆ ವ್ಯಾಪಾರಕ್ಕೆ ಸುರಕ್ಷಿತವಾದ ವ್ಯವಸ್ಥೆ ಮಾಡಿರುತ್ತಾರೆ. ಬೆಳ್ತಂಗಡಿ ಶಾಸಕರ ಮೂಲಕ ಉದ್ಘಾಟನೆಗೊಂಡಿದ್ದು ಜಗದೀಶ್ ಅವರ ಮುಖದಲ್ಲಿನ ಮುಗುಲ್ನಗು ಎಲ್ಲವನ್ನೂ ಹೇಳುತಿತ್ತು.

ಸಮಾಜಮುಖಿ ಚಿಂತನೆಗಳಿಂದ ಸಹಕಾರಿ ಸಂಘವೊಂದು ಹೇಗೆ ಜನಮನ್ನಣೆ ಗಳಿಸಬಹುದು ಎಂಬುದಕ್ಕೆ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಂಘ ಮಾದರಿ ನಿದರ್ಶನವಾಗಿದೆ.

Related posts

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya
error: Content is protected !!