September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

ಬೆಳ್ತಂಗಡಿ: ಉಪ್ಪಿನಂಗಡಿ ಹೋಟೆಲೊಂದರ ಕಾರ್ಮಿಕ ಮೊದಲ ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ಪಕ್ಕದಲ್ಲಿ ಹರಿಯುವ ತೋಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನ.4ರಂದು ನಸುಕಿನ ವೇಳೆ ಸಂಭವಿಸಿದೆ.

ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಬನಾರಿ ಮನೆ ನಿವಾಸಿ ಗಣೇಶ್ ನಾಯ್ಕ (60) ಎಂಬವರೇ ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಉಪ್ಪಿನಂಗಡಿಯ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಟೇಲೊಂದರಲ್ಲಿ ಕಾರ್ಮಿಕರಾಗಿದ್ದು, ನಸುಕಿನ ವೇಳೆ ಎದ್ದು ಕಾರಿಡಾರ್ ಬಳಿ ಬಂದಾಗ ಅಯತಪ್ಪಿ ಕೆಳಗಿನ ತೋಡಿಗೆ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯಗೊಂಡ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನೆಗೆ ಸಂಬಂಧಿಸಿ ಮೃತರ ಮಗ ಜಗದೀಶ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya
error: Content is protected !!