March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

ಪಟ್ರಮೆ : ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 4 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾದ ದೇವಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಉದ್ಘಾಟನಾ ಭಾಷಣ ಮಾಡಿ ಶುಭ ಹಾರೈಸಿದರು.
ನಮ್ಮ ವೈಚಾರಿಕತೆ ಮತ್ತು ಪಂಚ ಪರಿವರ್ತನೆ ವಿಷಯವನ್ನು ಸೀತಾರಾಮ್ ಬೆಳಾಲು ಮಂಡನೆ ಮಾಡಿದರು. ಬೂತ್ ಸಂಘಟನೆ ಮತ್ತು ಸ್ಥಳೀಯ ಆಡಳಿತದೊಂದಿಗೆ ನಮ್ಮ ಪಾತ್ರ ಈ ವಿಷಯವನ್ನು ಮಹಾಬಲ ಗೌಡ ನಾಗಂದೋಡಿ ಮಂಡಿಸಿದರು. ವಿಕಸಿತ ಭಾರತದ ಅಮೃತ ಕಾಲದಲ್ಲಿ ನಮ್ಮ ಸಕ್ರಿಯತೆ ವಿಷಯವನ್ನು ವೃಷಾಂಕ್ ಖಾಡಿಲ್ಕರ್ ಅರಸಿನಮಕ್ಕಿ ಮಂಡಿಸಿದರು. ಬೂತ್ ಷಾ ಬೈಠಕ್ ಧರ್ಮಸ್ಥಳ ಮಹಾಶಕ್ತಿಕೇಂದ್ರ ಅಧ್ಯಕ್ಷ ಹರೀಶ್ ಕೆ. ಬಿ. ತೆಗೆದುಕೊಂಡು ವರದಿ ಪಡೆದುಕೊಂಡರು.

ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿದರು. ಮಂಡಲ ಉಪಾಧ್ಯಕ್ಷ ಚನ್ನಕೇಶವ ಹಾಗೂ ಪಟ್ರಮೆ ಶಕ್ತಿಕೇಂದ್ರ ಪ್ರಭಾರಿ ಸಂದೀಪ್ ರೈ ಧರ್ಮಸ್ಥಳ ವೇದಿಕೆ ಯಲ್ಲಿ ಉಪಸ್ಥಿತರಿದ್ದರು. ಉದಯ ಕುಮಾರ್ ಸ್ವಾಗತಿಸಿ, ಶಕ್ತಿಕೇಂದ್ರ ಪ್ರಮುಖ್ ಹಾಗೂ ಪಂಚಾಯತ್ ಅಧ್ಯಕ್ಷ ಮನೋಜ್ ಗೌಡ ಧನ್ಯವಾದ ಸಮರ್ಪಿಸಿದರು.

Related posts

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!