25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

ಮುರುಗೋಳಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನ.೫ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತೀ ಬೆಂಬಲಿತ ೧೨ ಮಂದಿ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಪರಭಾವಗೊಳಿಸಿದ್ದಾರೆ. ಒಟ್ಟು ೧೨ ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಸಾಮಾನ್ಯ ಸ್ಥಾನದಿಂದ ೬ ಮಂದಿ, ಅನೂಸೂಚಿತ ಜಾತಿ ಹಾಗೂ ಪಂಗಡ ಮೀಸಲುವಿನಿಂದ, ಹಿಂದುಳಿದ ವರ್ಗ “ಎ” ಹಾಗೂ “ಬಿ” ಮೀಸಲು ಸ್ಥಾನದಿಂದ ತಲಾ ಒಂದರAತೆ ಹಾಗೂ ಮಹಿಳಾ ಮೀಸಲು ಎರಡು ಸ್ಥಾನಗಳಿಗೆ ಸ್ಪರ್ಧೆ ನಡೆದಿದ್ದು ಅಂತಿಮ ಕಣದಲ್ಲಿ ೨೪ ಅಭ್ಯರ್ಥಿಗಳಿದ್ದರು. ನ.೫ರಂದು ಬೆಳಗ್ಗೆ ೯ರಿಂದ ಸಂಜೆ ೪ರವರೆಗೆ ಬಾರ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮತದಾನ ನಡೆದಿದ್ದು ಒಟ್ಟು ೧೩೨೨ ಮಂದಿ ಮತದಾರರ ಪೈಕಿ ೧೧೮೨ ಮತಗಳು ಚಲಾವಣೆಗೊಂಡು ಶೇ.೮೯.೪೦ರಷ್ಟು ಮತದಾನ ನಡೆದಿದೆ. ಚುನಾವಣಾಧಿಕಾರಿಯಾಗಿ ಸಿಡಿಒ ಪ್ರತಿಮಾ ಹಾಗೂ ಸಹಾಯಕ ಚುನಾವಣಾಧಿಕಾರಿ ಸತೀಶ್ ಟಿ. ಕಾರ್ಯನಿರ್ವಹಿಸಿದರು, ಸಿಬ್ಬಂದಿಗಳು ಸಹಕರಿಸಿದರು.

ಸಾಮಾನ್ಯ ಕೇತ್ರದಿಂದ ಸ್ಪರ್ಧಿಸಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಹಾಲಿ ಅಧ್ಯಕ್ಷರಾದ ಪ್ರಸನ್ನ ಗೌಡ ಎನ್, ಪ್ರವೀಣ ರೈ ಪಿ., ಪ್ರಶಾಂತ್ ಪೈ, ಹಾಲಿ ನಿರ್ದೇಶಕ ಚಂದ್ರಶೇಖರ್ ಕುಂಡಡ್ಕ, ಹರ್ಷಿತ್ ಪೂಜಾರಿ ಕಲಾಯ ಹಾಗೂ ಹಾಲಿ ನಿರ್ದೇಶಕ ಮೋಹನ್ ಗೌಡ ಅಜಿರ, ಹಿಂದುಳಿದ ವರ್ಗ”ಎ”ನಿಂದ ಹಾಲಿ ನಿರ್ದೇಶಕ ಶೇಸಪ್ಪ ಸಾಲಿಯಾನ್, ಹಿಂದುಳಿದ ವರ್ಗ “ಬಿ”ನಿಂದ ಹಾಲಿ ನಿರ್ದೇಶಕ ರಾಜೇಶ್ ರೈ ಹೆನ್ನಡ್ಕ, ಮಹಿಳಾ ಮೀಸಲು ಹಾಲಿ ನಿರ್ದೇಶಕಿ ಕೇತ್ರದಿಂದ ಸವಿತಾ ವೆಂಕಟೇಶ್ ಹಾಗೂ ಹೇಮಾವತಿ ಸುರೇಶ್ ಹೇರಾಜೆ, ಪರಿಶಿಷ್ಟ ಪಂಗಡದಿAದ ಹಾಲಿ ಉಪಾಧ್ಯಕ್ಷ ಶಿವಾರಮ್ ಕೆಳಗಿನಂಗಡಿ ಹಾಗೂ ಪರಿಶಿಷ್ಟ ಜಾತಿಯಿಂದ ಹಾಲಿ ನಿರ್ದೇಶಕ ಸುರೇಶ್ ಸುಣ್ಣಾಜೆ ಅಭೂತಪೂರ್ವ ಮತಗಳಿಂದ ವಿಜಯಗಳಿಸಿದ್ದಾರೆ.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!