22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ರವರು ಇಂದು ಪಟ್ಟಾಭಿಶಕ್ತರಾಗಿದ್ದಾರೆ.

ಬೆಳ್ತಂಗಡಿ ಧಮ೯ಪ್ರಾಂತ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೀರೋ ಮಲಬಾರ್ ಕಥೋಲಿಕ ಧರ್ಮಸಭೆಯ ಮಹಾ ಧರ್ಮಾಧ್ಯಕ್ಷರಾದ ಅತೀ ವಂದನೀಯ ರಾಫೇಲ್ ತಟ್ಟಿಲ್ ರವರು ಮುಖ್ಯ ಅರ್ಚಕರಾಗಿ, ಆರ್ಚ್ ಬಿಷಪ್ ಅತೀ ವಂದನೀಯ ಜೋಸೆಫ್ ಪಾಮ್ಪ್ಲಾನಿ ತಲಶೇರಿ ಮೆಟ್ರೋ ಪೊಲಿಟನ್ ಧರ್ಮಪ್ರಾಂತ್ಯ ರವರ ಹಾಗೂ ಭಾರತದ ವಿವಿಧ ಕಡೆಗಳಿಂದ ಆಗಮಿಸಿದ ನಲವತ್ತನಾಲ್ಕು ಧರ್ಮಾಧ್ಯಕ್ಷರ ಪುಣ್ಯಸಾನಿಧ್ಯದಲ್ಲಿ ಪಟ್ಟಾಭಿಷೇಕವು ನೆರವೇರಿತು. ಭಾರತದ ವಿವಿಧ ಕಡೆಗಳಿಂದ ನಾಲ್ನೂರಕ್ಕೂ ಮಿಕ್ಕಿ ಧರ್ಮಗುರುಗಳು, ಧರ್ಮ ಭಗಿನಿಯರು ಮತ್ತು ನಾಲ್ಕು ಸಾವಿರಕ್ಕೂ ಮೀರಿದ ಕ್ರೈಸ್ತಬಾಂಧವರು ಪಾಲ್ಗೊಂಡರು.

ಪಟ್ಟಾಭಿಷೇಕದ ನಂತರದ ಸಾರ್ವಜನಿಕ ಸಮ್ಮೇಳನದಲ್ಲಿ ನೂತನ ಧರ್ಮಾಧ್ಯಕ್ಷರಿಗೆ ಅಭಿನಂದನೆಗಳು ಹಾಗೂ ನಿವೃತ್ತರಾಗುವ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿಯವರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಸಮ್ಮೇಳನದಲ್ಲಿ ಮಾತನಾಡಿದ ಭಾರತ ಕಥೋಲಿಕ್ ಧರ್ಮಧ್ಯಕ್ಷರುಗಳ ಸಮ್ಮೇಳನದ ಅಧ್ಯಕ್ಷ ಅತೀ ವಂದನೀಯ ಆಂಡ್ರೂಸ್ ಥಾಯತ್,” ಅತೀ ವಂದನೀಯ ಜೇಮ್ಸ್ ರವರು ಜನಹಿತ ಕೆಲಸಗಳನ್ನು ಮಂಚೂಣಿಯಲ್ಲಿ ಇರುವವರು, ಇದರಿಂದ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ಈ ನಾಡಿಗೆ ಒಳಿತಾಗುವುದು ಖಚಿತ” ಎಂದರು. “ಕಳೆದ 26 ವರ್ಷಗಳಲ್ಲಿ ಮಾಡಿದ ಅತ್ಯಂತ ಕಠಿಣ ಸಮಯದಲ್ಲಿ ತ್ಯಾಗ ಪ್ರೀತಿ ನಿಷ್ಠೆಯಿಂದ ಮಾಡಿದ ಸೇವೆ ಬಣ್ಣಿಸಲು ಅಸಾಧ್ಯ” ಎಂದು ಆಂಡ್ರಿಯಾ ಫ್ರಾನ್ಸಿಯಾ ಹೇಳಿದರು.

Related posts

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!