22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

ಧರ್ಮಸ್ಥಳ ಗ್ರಾಮದ ನೀರಚಿಲುಮೆ ಎಂಬಲ್ಲಿ ವೀಲ್ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ಜಗದೀಶ್ ನಾಯ್ಕ ಎಂಬವರಿಗೆ ಧರ್ಮಸ್ಥಳದ ಸಿ.ಎ ಬ್ಯಾಂಕ್ ಆಡಳಿತ ಮಂಡಳಿ ನೆರವಾಗಿದೆ.

ಆಕಸ್ಮಿಕ ಅವಘಡವೊಂದರಲ್ಲಿ ತನ್ನ ಸೊಂಟದ ಕೆಳಗಿನ ಶಕ್ತಿಯನ್ನೇ ಕಳೆದುಕೊಂಡರೂ ಕೂಡಾ ಛಲ ಬಿಡದ ತ್ರಿವಿಕ್ರಮನಂತೆ ಸ್ವಾಭಿಮಾನದ ಬದುಕು ಕಟ್ಟಿಕೊಂಡು ಸಣ್ಣ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡ ಜೀವ ಅದು. ಇವರ ವಿಷಯಗಳ ಬಗ್ಗೆ ಶ್ಯಾಮ್ ಪ್ರಸಾದ್ ಮತ್ತು ಶೈನಿ ಕಾಮತ್ ದಂಪತಿಯ ‘ರೈಡಿಂಗ್ ಜೋಡಿಗಳು’ ಎಂಬ ಯೂಟ್ಯೂಬ್ ನಲ್ಲಿ ಕಳೆದ ಕೆಲ ತಿಂಗಳ ಹಿಂದೆ ಪ್ರಸಾರ ಮಾಡಿದ್ದರು. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿತ್ತು ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರು ಜಗದೀಶ್ ಅವರ ವ್ಯಾಪಾರಕ್ಕೆ ಮಳೆಗಾಳಿಗಳಿಂದ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಸಿಎ ಬ್ಯಾಂಕ್‌ ಅಧ್ಯಕ್ಷ ಪ್ರೀತಮ್ ಅವರನ್ನು ಸಂಪರ್ಕಿಸಿ ಏನಾದರೂ ವ್ಯವಸ್ಥೆ ಮಾಡುವಂತೆ ತಿಳಿಸಿದ್ದರು.

ಸದಾ ವಿಭಿನ್ನ ಹಾಗೂ ವಿಶಿಷ್ಟ ಯೋಜನೆಗಳ ಮೂಲಕ ಮಾದರಿ ಕಾರ್ಯಕ್ರಮಗಳ ಮೂಲಕ ಜನಾನುರಾಗಿ ಆಗಿರುವ ಪ್ರೀತಮ್ ಅವರು ತಮ್ಮ ಆಡಳಿತ ವರ್ಗ ಹಾಗೂ ಸಿಬ್ಬಂದಿಗಳ ಜೊತೆಗೆ ಚರ್ಚಿಸಿ ಜಗದೀಶ್ ಅವರಿಗೆ ವ್ಯಾಪಾರಕ್ಕೆ ಸುರಕ್ಷಿತವಾದ ವ್ಯವಸ್ಥೆ ಮಾಡಿರುತ್ತಾರೆ. ಬೆಳ್ತಂಗಡಿ ಶಾಸಕರ ಮೂಲಕ ಉದ್ಘಾಟನೆಗೊಂಡಿದ್ದು ಜಗದೀಶ್ ಅವರ ಮುಖದಲ್ಲಿನ ಮುಗುಲ್ನಗು ಎಲ್ಲವನ್ನೂ ಹೇಳುತಿತ್ತು.

ಸಮಾಜಮುಖಿ ಚಿಂತನೆಗಳಿಂದ ಸಹಕಾರಿ ಸಂಘವೊಂದು ಹೇಗೆ ಜನಮನ್ನಣೆ ಗಳಿಸಬಹುದು ಎಂಬುದಕ್ಕೆ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಂಘ ಮಾದರಿ ನಿದರ್ಶನವಾಗಿದೆ.

Related posts

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya
error: Content is protected !!