22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

ಪಟ್ರಮೆ : ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 4 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾದ ದೇವಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಉದ್ಘಾಟನಾ ಭಾಷಣ ಮಾಡಿ ಶುಭ ಹಾರೈಸಿದರು.
ನಮ್ಮ ವೈಚಾರಿಕತೆ ಮತ್ತು ಪಂಚ ಪರಿವರ್ತನೆ ವಿಷಯವನ್ನು ಸೀತಾರಾಮ್ ಬೆಳಾಲು ಮಂಡನೆ ಮಾಡಿದರು. ಬೂತ್ ಸಂಘಟನೆ ಮತ್ತು ಸ್ಥಳೀಯ ಆಡಳಿತದೊಂದಿಗೆ ನಮ್ಮ ಪಾತ್ರ ಈ ವಿಷಯವನ್ನು ಮಹಾಬಲ ಗೌಡ ನಾಗಂದೋಡಿ ಮಂಡಿಸಿದರು. ವಿಕಸಿತ ಭಾರತದ ಅಮೃತ ಕಾಲದಲ್ಲಿ ನಮ್ಮ ಸಕ್ರಿಯತೆ ವಿಷಯವನ್ನು ವೃಷಾಂಕ್ ಖಾಡಿಲ್ಕರ್ ಅರಸಿನಮಕ್ಕಿ ಮಂಡಿಸಿದರು. ಬೂತ್ ಷಾ ಬೈಠಕ್ ಧರ್ಮಸ್ಥಳ ಮಹಾಶಕ್ತಿಕೇಂದ್ರ ಅಧ್ಯಕ್ಷ ಹರೀಶ್ ಕೆ. ಬಿ. ತೆಗೆದುಕೊಂಡು ವರದಿ ಪಡೆದುಕೊಂಡರು.

ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿದರು. ಮಂಡಲ ಉಪಾಧ್ಯಕ್ಷ ಚನ್ನಕೇಶವ ಹಾಗೂ ಪಟ್ರಮೆ ಶಕ್ತಿಕೇಂದ್ರ ಪ್ರಭಾರಿ ಸಂದೀಪ್ ರೈ ಧರ್ಮಸ್ಥಳ ವೇದಿಕೆ ಯಲ್ಲಿ ಉಪಸ್ಥಿತರಿದ್ದರು. ಉದಯ ಕುಮಾರ್ ಸ್ವಾಗತಿಸಿ, ಶಕ್ತಿಕೇಂದ್ರ ಪ್ರಮುಖ್ ಹಾಗೂ ಪಂಚಾಯತ್ ಅಧ್ಯಕ್ಷ ಮನೋಜ್ ಗೌಡ ಧನ್ಯವಾದ ಸಮರ್ಪಿಸಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya
error: Content is protected !!