July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ರವರು ಇಂದು ಪಟ್ಟಾಭಿಶಕ್ತರಾಗಿದ್ದಾರೆ.

ಬೆಳ್ತಂಗಡಿ ಧಮ೯ಪ್ರಾಂತ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೀರೋ ಮಲಬಾರ್ ಕಥೋಲಿಕ ಧರ್ಮಸಭೆಯ ಮಹಾ ಧರ್ಮಾಧ್ಯಕ್ಷರಾದ ಅತೀ ವಂದನೀಯ ರಾಫೇಲ್ ತಟ್ಟಿಲ್ ರವರು ಮುಖ್ಯ ಅರ್ಚಕರಾಗಿ, ಆರ್ಚ್ ಬಿಷಪ್ ಅತೀ ವಂದನೀಯ ಜೋಸೆಫ್ ಪಾಮ್ಪ್ಲಾನಿ ತಲಶೇರಿ ಮೆಟ್ರೋ ಪೊಲಿಟನ್ ಧರ್ಮಪ್ರಾಂತ್ಯ ರವರ ಹಾಗೂ ಭಾರತದ ವಿವಿಧ ಕಡೆಗಳಿಂದ ಆಗಮಿಸಿದ ನಲವತ್ತನಾಲ್ಕು ಧರ್ಮಾಧ್ಯಕ್ಷರ ಪುಣ್ಯಸಾನಿಧ್ಯದಲ್ಲಿ ಪಟ್ಟಾಭಿಷೇಕವು ನೆರವೇರಿತು. ಭಾರತದ ವಿವಿಧ ಕಡೆಗಳಿಂದ ನಾಲ್ನೂರಕ್ಕೂ ಮಿಕ್ಕಿ ಧರ್ಮಗುರುಗಳು, ಧರ್ಮ ಭಗಿನಿಯರು ಮತ್ತು ನಾಲ್ಕು ಸಾವಿರಕ್ಕೂ ಮೀರಿದ ಕ್ರೈಸ್ತಬಾಂಧವರು ಪಾಲ್ಗೊಂಡರು.

ಪಟ್ಟಾಭಿಷೇಕದ ನಂತರದ ಸಾರ್ವಜನಿಕ ಸಮ್ಮೇಳನದಲ್ಲಿ ನೂತನ ಧರ್ಮಾಧ್ಯಕ್ಷರಿಗೆ ಅಭಿನಂದನೆಗಳು ಹಾಗೂ ನಿವೃತ್ತರಾಗುವ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿಯವರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಸಮ್ಮೇಳನದಲ್ಲಿ ಮಾತನಾಡಿದ ಭಾರತ ಕಥೋಲಿಕ್ ಧರ್ಮಧ್ಯಕ್ಷರುಗಳ ಸಮ್ಮೇಳನದ ಅಧ್ಯಕ್ಷ ಅತೀ ವಂದನೀಯ ಆಂಡ್ರೂಸ್ ಥಾಯತ್,” ಅತೀ ವಂದನೀಯ ಜೇಮ್ಸ್ ರವರು ಜನಹಿತ ಕೆಲಸಗಳನ್ನು ಮಂಚೂಣಿಯಲ್ಲಿ ಇರುವವರು, ಇದರಿಂದ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ಈ ನಾಡಿಗೆ ಒಳಿತಾಗುವುದು ಖಚಿತ” ಎಂದರು. “ಕಳೆದ 26 ವರ್ಷಗಳಲ್ಲಿ ಮಾಡಿದ ಅತ್ಯಂತ ಕಠಿಣ ಸಮಯದಲ್ಲಿ ತ್ಯಾಗ ಪ್ರೀತಿ ನಿಷ್ಠೆಯಿಂದ ಮಾಡಿದ ಸೇವೆ ಬಣ್ಣಿಸಲು ಅಸಾಧ್ಯ” ಎಂದು ಆಂಡ್ರಿಯಾ ಫ್ರಾನ್ಸಿಯಾ ಹೇಳಿದರು.

Related posts

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya
error: Content is protected !!