March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

ಉಜಿರೆ : ಉಜಿರೆ ಚಾರ್ಮಾಡಿ ರೋಡ್ ನ ಎಂ ಎಸ್ ಕಟ್ಟಡದಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಹೋಲ್ ಸೇಲ್ ಮತ್ತು ರಿಟೇಲ್ ಶಾಪ್ ನವೆಂಬರ್ 05 ರಂದು ಶುಭಾರಂಭಗೊಂಡಿದೆ. ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಶುಭಾರಂಭವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೇಟ್ನಾಯರ್ ಇವರು ಉದ್ಘಾಟನೆ ನೆರವೇರಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ ಗಣೇಶ್ ಪ್ರಸಾದ್ ಮೋಟಾರ್ ಲಿಂಕ್ಸ್ ನ ಮಾಲಕರಾದ ಶ್ರೀ ಪಾಂಡುರಂಗ ಭಂಡಾರ್ಕರ್, ಆರ್ ಎಮ್ ಆರ್ಥ್ ಮೂವರ್ಸ್ ನ ರವಿ ಚಕ್ಕಿತಾಯ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪದ್ಮಾವತಿ ಶೆಟ್ಟಿ, ಧನರಾಜ್ ಶೆಟ್ಟಿ,ರಕ್ಷಾ ಧನರಾಜ್ ಶೆಟ್ಟಿ ದೊಂಪದಪಲ್ಕೆ, ದಯಾ ಶೆಟ್ಟಿ ನೇತ್ರಾವತಿ, ಗಣೇಶ್ ಶೆಟ್ಟಿ ಅಜೆಕುರಿ ಉಪಸ್ಥಿತರಿದ್ದರು . ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಮಾಲಕರಾದ ಚರಣ್ ಶೆಟ್ಟಿ-ಅಶ್ವಿನಿ ಶೆಟ್ಟಿ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿ, ಸಂಸ್ಥೆಯಲ್ಲಿ ಕಂಪ್ಯೂಟರ್ ಸೇಲ್ಸ್ ಮತ್ತು ಸರ್ವಿಸ್, ಪ್ರಿಂಟರ್ ರಿಪೇರಿ, ಟೋನರ್ ರಿಫಿಲ್ಲಿಂಗ್, ಡ್ರೈವಿಂಗ್ ಲೈಸೆನ್ಸ್, ಸಿ ಸಿ ಕ್ಯಾಮೆರಾ ಸೇಲ್ಸ್ ಮತ್ತು ಸರ್ವಿಸ್, ಲೇಸರ್ ಇಂಕ್ ಜೆಟ್ ಪ್ರಿಂಟರ್ ಸರ್ವಿಸ್, ಸೌಲಭ್ಯಗಳು ಲಭ್ಯವಿದೆ ಎಂದು ಹೇಳಿದರು. ಟೀಚರ್ಸ್ ಕೋಆಪರೇಟಿವ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ ನಿರೂಪಿಸಿದರು.

Related posts

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ಬೆಳ್ತಂಗಡಿಯಲ್ಲಿ ಹೊಸ ಪ್ರಯತ್ನವೊಂದಕ್ಕೆ ಹೆಜ್ಜೆ, ಬೆಳ್ತಂಗಡಿ ನೈಟ್ಸ್ – 2025 , ಫುಡ್ ಫೆಸ್ಟಿವಲ್ ಮತ್ತು ಮ್ಯೂಸಿಕಲ್ ನೈಟ್

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya
error: Content is protected !!