July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

ಉಜಿರೆ : ಉಜಿರೆ ಚಾರ್ಮಾಡಿ ರೋಡ್ ನ ಎಂ ಎಸ್ ಕಟ್ಟಡದಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಹೋಲ್ ಸೇಲ್ ಮತ್ತು ರಿಟೇಲ್ ಶಾಪ್ ನವೆಂಬರ್ 05 ರಂದು ಶುಭಾರಂಭಗೊಂಡಿದೆ. ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಶುಭಾರಂಭವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೇಟ್ನಾಯರ್ ಇವರು ಉದ್ಘಾಟನೆ ನೆರವೇರಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ ಗಣೇಶ್ ಪ್ರಸಾದ್ ಮೋಟಾರ್ ಲಿಂಕ್ಸ್ ನ ಮಾಲಕರಾದ ಶ್ರೀ ಪಾಂಡುರಂಗ ಭಂಡಾರ್ಕರ್, ಆರ್ ಎಮ್ ಆರ್ಥ್ ಮೂವರ್ಸ್ ನ ರವಿ ಚಕ್ಕಿತಾಯ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪದ್ಮಾವತಿ ಶೆಟ್ಟಿ, ಧನರಾಜ್ ಶೆಟ್ಟಿ,ರಕ್ಷಾ ಧನರಾಜ್ ಶೆಟ್ಟಿ ದೊಂಪದಪಲ್ಕೆ, ದಯಾ ಶೆಟ್ಟಿ ನೇತ್ರಾವತಿ, ಗಣೇಶ್ ಶೆಟ್ಟಿ ಅಜೆಕುರಿ ಉಪಸ್ಥಿತರಿದ್ದರು . ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಮಾಲಕರಾದ ಚರಣ್ ಶೆಟ್ಟಿ-ಅಶ್ವಿನಿ ಶೆಟ್ಟಿ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿ, ಸಂಸ್ಥೆಯಲ್ಲಿ ಕಂಪ್ಯೂಟರ್ ಸೇಲ್ಸ್ ಮತ್ತು ಸರ್ವಿಸ್, ಪ್ರಿಂಟರ್ ರಿಪೇರಿ, ಟೋನರ್ ರಿಫಿಲ್ಲಿಂಗ್, ಡ್ರೈವಿಂಗ್ ಲೈಸೆನ್ಸ್, ಸಿ ಸಿ ಕ್ಯಾಮೆರಾ ಸೇಲ್ಸ್ ಮತ್ತು ಸರ್ವಿಸ್, ಲೇಸರ್ ಇಂಕ್ ಜೆಟ್ ಪ್ರಿಂಟರ್ ಸರ್ವಿಸ್, ಸೌಲಭ್ಯಗಳು ಲಭ್ಯವಿದೆ ಎಂದು ಹೇಳಿದರು. ಟೀಚರ್ಸ್ ಕೋಆಪರೇಟಿವ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ ನಿರೂಪಿಸಿದರು.

Related posts

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya
error: Content is protected !!