25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

ಉಜಿರೆ : ಉಜಿರೆ ಚಾರ್ಮಾಡಿ ರೋಡ್ ನ ಎಂ ಎಸ್ ಕಟ್ಟಡದಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಹೋಲ್ ಸೇಲ್ ಮತ್ತು ರಿಟೇಲ್ ಶಾಪ್ ನವೆಂಬರ್ 05 ರಂದು ಶುಭಾರಂಭಗೊಂಡಿದೆ. ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಶುಭಾರಂಭವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೇಟ್ನಾಯರ್ ಇವರು ಉದ್ಘಾಟನೆ ನೆರವೇರಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ ಗಣೇಶ್ ಪ್ರಸಾದ್ ಮೋಟಾರ್ ಲಿಂಕ್ಸ್ ನ ಮಾಲಕರಾದ ಶ್ರೀ ಪಾಂಡುರಂಗ ಭಂಡಾರ್ಕರ್, ಆರ್ ಎಮ್ ಆರ್ಥ್ ಮೂವರ್ಸ್ ನ ರವಿ ಚಕ್ಕಿತಾಯ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪದ್ಮಾವತಿ ಶೆಟ್ಟಿ, ಧನರಾಜ್ ಶೆಟ್ಟಿ,ರಕ್ಷಾ ಧನರಾಜ್ ಶೆಟ್ಟಿ ದೊಂಪದಪಲ್ಕೆ, ದಯಾ ಶೆಟ್ಟಿ ನೇತ್ರಾವತಿ, ಗಣೇಶ್ ಶೆಟ್ಟಿ ಅಜೆಕುರಿ ಉಪಸ್ಥಿತರಿದ್ದರು . ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಮಾಲಕರಾದ ಚರಣ್ ಶೆಟ್ಟಿ-ಅಶ್ವಿನಿ ಶೆಟ್ಟಿ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿ, ಸಂಸ್ಥೆಯಲ್ಲಿ ಕಂಪ್ಯೂಟರ್ ಸೇಲ್ಸ್ ಮತ್ತು ಸರ್ವಿಸ್, ಪ್ರಿಂಟರ್ ರಿಪೇರಿ, ಟೋನರ್ ರಿಫಿಲ್ಲಿಂಗ್, ಡ್ರೈವಿಂಗ್ ಲೈಸೆನ್ಸ್, ಸಿ ಸಿ ಕ್ಯಾಮೆರಾ ಸೇಲ್ಸ್ ಮತ್ತು ಸರ್ವಿಸ್, ಲೇಸರ್ ಇಂಕ್ ಜೆಟ್ ಪ್ರಿಂಟರ್ ಸರ್ವಿಸ್, ಸೌಲಭ್ಯಗಳು ಲಭ್ಯವಿದೆ ಎಂದು ಹೇಳಿದರು. ಟೀಚರ್ಸ್ ಕೋಆಪರೇಟಿವ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ ನಿರೂಪಿಸಿದರು.

Related posts

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya
error: Content is protected !!