26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

ಉಜಿರೆ: ಮಾನವನ ಸೃಷ್ಟಿ ಅದ್ಭುತ, ಆತನ ಬುದ್ಧಿ ಮಹತ್ವವಾದದ್ದು, ಯಂತ್ರದ ಬಳಕೆ ಮೂಲಕ ಜಗತ್ತಿಗೆ ಎದುರಾಗುವ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯ ಆವನಲ್ಲಿದೆ, ಜೊತೆಗೆ ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆ ಮೂಲಕ ಶೈಕ್ಷಣಿಕ ಕ್ಷೇತ್ರವಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ಣ ಸಾಧನೆ ಸಾಧ್ಯವಾಗಿಸಿದ್ದಾನೆ. ಕಾಲೇಜಲ್ಲಿ ಚಾಲನೆಗೊಂಡ ಡಿಜಿಟಲ್ ಗ್ರಂಥಾಲಯದ ಸರಿಯಾದ ಬಳಕೆ ನಿಮ್ಮಿಂದಾಗಲಿಯೆಂದು, ಅತಿಥಿಯಾಗಿ ಆಗಮಿಸಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ ನೀಡಿದ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಪ್ರಮೋದ್ ಕುಮಾರ್ ಹೇಳಿದರು.

ಎಸ್. ಡಿ. ಎಂ. ಪದವಿ ಕಾಲೇಜಿನ ಗಣಕಶಾಸ್ತ್ರ ಮುಖ್ಯಸ್ಥ ಶೈಲೇಶ್ ಕುಮಾರ್ ಜೊತೆಗಿದ್ದು ಸಹಕರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಅಧ್ಯಕ್ಷತೆ ವಹಿಸಿ ಸಂಸ್ಥೆ ವಿದ್ಯಾರ್ಥಿಗಳಿಗಾಗಿ ಎಲ್ಲಾ ರೀತಿಯಲ್ಲೂ ಶ್ರಮಿಸುತ್ತಿದ್ದು, ವಿದ್ಯಾರ್ಥಿಗಳು ಅದರ ಪೂರ್ಣ ಪ್ರಯೋಜನ ಪಡೆದುಕೊಳ್ಳುವುದು ಬಹಳ ಮುಖ್ಯ ಎಂದರು.
ಅತಿಥಿಗಳ ಸಾಧನೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ ಪಡೆದ ಪ್ರಮೋದ್ ಕುಮಾರ್ ಹಾಗೂ ರಾಷ್ಟ್ರೀಯ ಮಟ್ಟದ ವ್ಯಂಗ್ಯಚಿತ್ರಕಾರ ಪ್ರಶಸ್ತಿ ಪಡೆದ ಶೈಲೇಶ್ ಕುಮಾರ್ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಂಥಪಾಲಕರಾದ ಗಿರಿಧರ್ ಸಹಕರಿಸಿದರು.

ಗಣಕ ಶಾಸ್ತ್ರದ ಉಪನ್ಯಾಸಕ ಪವಿತ್ರ ಕುಮಾರ್ ವಂದಿಸಿದರು. ಕಾಲೇಜಿನ ವಿದ್ಯಾರ್ಥಿ ನಿಖಿಲ್ ನಿರೂಪಿಸಿದರು.

Related posts

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya
error: Content is protected !!