September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

ಬೆಳ್ತಂಗಡಿ: ಕಂಠೀರವ ಕ್ರೀಡಾಂಗಣದಲ್ಲಿ ನ.4 ರಂದು ನಡೆದ ಕೂಟದಲ್ಲಿ ದಕ್ಷಿಣ ಕನ್ನಡದ ಅದ್ವಿಕಾ ಕೆ.ಪಿ. ನಾಲ್ಕನೇ ಆವೃತ್ತಿಯ 14 ವಯೋಮಿತಿ ಕರ್ನಾಟಕ ಮಿನಿ ಕ್ರೀಡಾಕೂಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಬಾಲಕಿಯರ 100ಮೀ. ಓಟದ ವಿಭಾಗದಲ್ಲಿ ಸ್ವರ್ಣ ಪದಕ ಗೆದ್ದುಕೊಂಡರು. ಈ ಮೂಲಕ ಕ್ರೀಡಾಕೂಟದ ಅತಿವೇಗದ ಓಟಗಾರ್ತಿ ಎನಿಸಿದರು.

ಇವರು ಮಂಗಳ ಕ್ರೀಡಾಂಗಣದ ಮಂಗಳ ಅಥ್ಲೆಟಿಕ್ ಕ್ಲಬ್ ನಲ್ಲಿ ಅಂತರರಾಷ್ಟ್ರೀಯ ಕೋಚ್ ದಿನೇಶ್ ಕುಂದರ್ ರವರಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದವರಾಗಿದ್ದು ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಡಾ. ಅರುಣ್ ಕೆಪಿ ಮತ್ತು ಗೀತಾ ದಂಪತಿಯ ಸುಪುತ್ರಿಯಾಗಿದ್ದು, ಸೈಂಟ್ ಆಗ್ನೆಸ್ ಸಿಬಿಎಸ್ಸಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya
error: Content is protected !!