September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

ಬೆಳ್ತಂಗಡಿ: ಮಂಗಳೂರಿನ ಶಕ್ತಿನಗರದಲ್ಲಿರುವ ಎನಿಮಲ್ ಕೇರ್ ಟ್ರಸ್ಟ್ ಬೆಳ್ತಂಗಡಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ನ. 9ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಉಜಿರೆ ಬಸ್‌ ಸ್ಟ್ಯಾಂಡ್ ಬಳಿ ಸಂಧ್ಯಾ ಟ್ರೇಡರ್ಸ ಎದುರು, ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ ಏರ್ಪಡಿಸಿದೆ.

ಎಲ್ಲಾ ಮರಿಗಳಿಗೆ ರೋಗ ನಿರೋಧಕ ಚುಚ್ಚು ಮದ್ದುಗಳನ್ನು ನೀಡಲಾಗಿರುತ್ತದೆ. ಎನಿಮಲ್ ಕೇರ್ ಟ್ರಸ್ಟನವರು ಆದಷ್ಟು ಸಂತಾನವಾಗದಂತೆ ಚಿಕಿತ್ಸೆ ಮಾಡಿದ ಬೆಕ್ಕು/ನಾಯಿ ಮರಿಗಳನ್ನು ತರುವ ಭರವಸೆ ಇತ್ತಿದ್ದಾರೆ. ಒಂದು ವೇಳೆ ಶಿಬಿರಕ್ಕೆ ತಂದಿರುವ ಬೆಕ್ಕು/ ನಾಯಿ ಮರಿಗಳಿಗೆ ಸಂತಾನವಾಗದಂತೆ ಚಿಕಿತ್ಸೆ ಆಗಿರದಿದ್ದರೆ, ಅವರ ಕೇಂದ್ರಕ್ಕೆ ಅವುಗಳನ್ನು ತಂದಲ್ಲಿ, ಉಚಿತವಾಗಿ ಮಾಡಿಕೊಡಲಾಗುವುದು. ಆರ್ಥಿಕವಾಗಿ ದುರ್ಬಲರು ಇದರ ಪ್ರಯೋಜನ ಪಡೆಯಬಹುದು.
ಶಿಬಿರದಲ್ಲಿ ಬೆಕ್ಕು/ನಾಯಿ ಮರಿಗಳನ್ನು ಉಚಿತವಾಗಿ ಪಡೆದುಕೊಳ್ಳ ಬಯಸುವವರು ತಮ್ಮ ವಿಳಾಸದ ನಕಲು ಪತ್ರ ಕೊಡಬೇಕು., ಪಡೆದುಕೊಳ್ಳುವ ಬೆಕ್ಕು/ನಾಯಿ ಮರಿಗಳಿಗೆ ಸಂತಾನವಾಗದAತೆ ಚಿಕಿತ್ಸೆ ಆಗಿರದಿದ್ದರೆ ಅದನ್ನು ಮಾಡಿಸಬೇಕು, ತಿಂಗಳಿಗೊಮ್ಮೆ ಅವುಗಳ ಆರೋಗ್ಯ ವರದಿ ನೀಡಬೇಕು.


ಹೆಚ್ಚಿನ ವಿವರಗಳಿಗೆ ಎನಿಮಲ್ ಕೇರ್ ಟ್ರಸ್ಟ ಸಂಖ್ಯೆ 9902253064 ಸಂಪರ್ಕಿಸಬಹುದು ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ. ಪ್ರಕಾಶ ಪ್ರಭುರವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ರೂ.10.88 ಲಕ್ಷ ಲಾಭ-ಶೇ.68 ಬೋನಸ್, ಶೇ.25 ಡಿವಿಡೆಂಡ್ ಘೋಷಣೆ

Suddi Udaya
error: Content is protected !!